ಗೌರಿ ಲಂಕೇಶ್ ಹತ್ಯೆ ಕೇಸ್: ರಾಹುಲ್ ಗಾಂಧಿಗೆ ಸಮನ್ಸ್ ಜಾರಿ

Feb 25, 2019, 10:17 AM IST

ಗೌರಿ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿದೆ. ಗೌರಿ ಹತ್ಯೆ ಪ್ರಕರಣದಲ್ಲಿ ಆರ್ ಎಸ್ ಎಸ್ ಕೈವಾಡದ ಶಂಕೆ ವ್ಯಕ್ತಪಡಿಸಿದ್ದರು ರಾಹುಲ್ ಗಾಂಧಿ ಹಾಗೂ ಸೀತಾರಾಮ ಯೆಚೂರಿ. ಇಬ್ಬರ ವಿರುದ್ಧ ಆರ್ ಎಸ್ ಎಸ್ ಕಾರ್ಯಕರ್ತ ಧೃತಿಮಾನ್ ಜೋಶಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿ ರಾಹುಲ್ ಹಾಗೂ ಯೆಚೂರಿಗೆ ಸಮನ್ಸ್ ಜಾರಿ ಮಾಡಿದೆ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್.