ಕರ್ನಾಟಕ ಪ್ರವಾಹ : ಶಾಲೆ - ಕಾಲೇಜುಗಳ ರಜೆ ಕಡಿತ ?

Published : Aug 18, 2019, 12:07 PM IST
ಕರ್ನಾಟಕ ಪ್ರವಾಹ :  ಶಾಲೆ - ಕಾಲೇಜುಗಳ ರಜೆ ಕಡಿತ ?

ಸಾರಾಂಶ

ಪ್ರವಾಹ ಸಂದರ್ಭದಲ್ಲಿ ಹಲವು ದಿನಗಳ ಕಾಲ ಶಾಲೆಗಳು ಮುಚ್ಚಿದ್ದ ಕಾರಣಕ್ಕೆ ಮುಂದಿನ ದಿನಗಳಲ್ಲಿ ರಜೆ ದಿನವೂ ಶಾಲೆ ನಡೆಸಲು ತೀರ್ಮಾನಿಸಲಾಗಿದೆ. 

ಮಂಗಳೂರು [ಆ.18]: ಮಹಾಮಳೆಗೆ ಕಳೆದ ವಾರ ಶಾಲಾ- ಕಾಲೇಜುಗಳಿಗೆ ನೀಡಿದ್ದ ರಜೆಯನ್ನು ಮುಂದಿನ ರಜಾ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. 

ಇದನ್ನು ರಾಜ್ಯಾದ್ಯಂತ ಏಕರೂಪದಲ್ಲಿ ಜಾರಿಗೆ ತರಲು ಉದ್ದೇಶಿಸಿದೆ. ಈ ಕುರಿತು ಶನಿವಾರ ನಡೆದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದ್ದು, ಮಳೆಯ ಅಬ್ಬರ ಮುಗಿದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲು ನಿರ್ಧರಿಸಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ. ರಜೆಯನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಶನಿವಾರ ಪೂರ್ಣ ದಿನ ಮತ್ತು ಭಾನುವಾರವೂ ತರಗತಿ ನಡೆಸಲು ಶಿಕ್ಷಣ ಇಲಾಖೆ ಉದ್ದೇಶಿಸಿದೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದಸರಾ ರಜೆ ಕಡಿತ ಇಲ್ಲ?: ಈ ಬಾರಿ ದಸರಾ ಅವಧಿಯ ಮಧ್ಯಂತರ ರಜೆಯನ್ನು ಮಳೆಗಾಲ ರಜೆಗೆ ಹೊಂದಾಣಿಕೆ ಮಾಡುವ ಸಾಧ್ಯತೆ ಇಲ್ಲ. ಯಾಕೆಂದರೆ, ದಸರಾ ಸಂಭ್ರಮದಿಂದ ವಂಚಿತಗೊಳಿಸಬಾರದು ಎಂಬ ಕಾರಣಕ್ಕೆ ದಸರೆ ರಜೆಯನ್ನು ಮೊಟಕುಗೊಳಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ. ಅದೇ ರೀತಿ ಅಲ್ಪಸಂಖ್ಯಾತ ಶಾಲೆಗಳು ಡಿಸೆಂಬರ್‌ನಲ್ಲಿ ಕ್ರಿಸ್ಮಸ್‌ಗೆ ಒಂದು ವಾರ ಕಾಲ ರಜೆ ನೀಡುತ್ತಾರೆ. ಈ ರಜೆಗೂ ತೊಡಕಾಗದಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು