
ಮೈಸೂರು (ನ.01): ನಂಜನಗೂಡು ಉಪಚುನಾವಣೆಗೆ ಸಚಿವ ಮಹದೇವಪ್ಪ ಪುತ್ರನ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಸಚಿವರ ಪುತ್ರ ಸುನೀಲ್ ಬೋಸ್ 5 ಸಾವಿರ ಕಾರ್ಯಕರ್ತರಿಗೆ ಬಾಡೂಟ ಆಯೋಜಿಸಿದ್ದರು.
ನಂಜನಗೂಡು ಕ್ಷೇತ್ರದಿಂದ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರನ ರಾಜಕೀಯ ಪ್ರವೇಶ ಆಗುವ ಹಿನ್ನೆಲೆಯಲ್ಲಿ ಟಿ.ನರಸೀಪುರ ತಾಲೂಕಿನ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಉಣಬಡಿಸಿದ್ದಾರೆ.
ಸುನೀಲ್ ಬೋಸ್ ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಹಿನ್ನೆಲೆಯಲ್ಲಿ ಕಣಕ್ಕಿಳಿಯಲು ಈಗಿನಿಂದಲೇ ಸಿದ್ಧತೆ ನಡೆಯುತ್ತಿದ್ದು , ಕಾರ್ಯಕರ್ತರನ್ನು ಸೆಳೆಯಲು ಈ ಬಾಡೂಟ ಆಯೋಜಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.