ರಾಣಿ ಪಾತ್ರದಲ್ಲಿ ಸನ್ನಿ : ಎದುರಾಯ್ತು ಸಂಕಷ್ಟ

Published : Oct 23, 2018, 08:46 AM IST
ರಾಣಿ ಪಾತ್ರದಲ್ಲಿ ಸನ್ನಿ : ಎದುರಾಯ್ತು ಸಂಕಷ್ಟ

ಸಾರಾಂಶ

ವೀರಮಾದೇವಿ ಸಿನಿಮಾದಿಂದ ನೀಲಿ ಚಿತ್ರ ತಾರೆ ನಟಿ ಸನ್ನಿ ಲಿಯೋನ್‌ ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು, ಹುಬ್ಬಳ್ಳಿ ಮತ್ತು ಕೊಪ್ಪಳ ನಗರಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. 

ಬೆಂಗಳೂರು :  ತಮಿಳು ಭಾಷೆಯಲ್ಲಿ ನಿರ್ಮಿಸುತ್ತಿರುವ ‘ವೀರಮಾದೇವಿ’ ಸಿನಿಮಾದಿಂದ ನೀಲಿ ಚಿತ್ರ ತಾರೆ ನಟಿ ಸನ್ನಿ ಲಿಯೋನ್‌ ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು, ಹುಬ್ಬಳ್ಳಿ ಮತ್ತು ಕೊಪ್ಪಳ ನಗರಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರತಾಪ್‌ ಎಂಬ ಕರವೇ ಕಾರ್ಯಕರ್ತನೊಬ್ಬ ಬ್ಲೇಡಿನಿಂದ ಕೈ ಕುಯ್ದುಕೊಂಡು ರಕ್ತ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಪುರಭವನದ ಮುಂದೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ‘ವೀರಮಾದೇವಿ ಸಿನಿಮಾದಲ್ಲಿ ಸನ್ನಿ ಲಿಯೋನ್‌ ನಟಿಸುವುದರಿಂದ ದೇಶದ ಸಂಸ್ಕೃತಿ, ಸಂಪ್ರದಾಯಕ್ಕೆ ಅಪಮಾನವಾಗುತ್ತದೆ. ದಕ್ಷಿಣ ಭಾರತವನ್ನು ಆಳಿದ ರಾಷ್ಟ್ರಕೂಟ ವಂಶದ ಮಹಾರಾಣಿ ವೀರಮಾದೇವಿ ಐತಿಹಾಸಿಕ ಮಹಿಳೆ. ಅಂತಹ ಮಹಿಳೆಯ ಪಾತ್ರವನ್ನು ಸನ್ನಿ ಲಿಯೋನ್‌ ಮಾಡುವುದರಿಂದ ಹಿಂದೂ ಸಂಪ್ರದಾಯಕ್ಕೆ ಅಪಚಾರವಾಗುತ್ತದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸನ್ನಿ ಲಿಯೋನ್‌ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪುನೀತ್‌ಕುಮಾರ ರೆಡ್ಡಿ ಎಂಬ ಕಾರ್ಯಕರ್ತ ಬ್ಲೇಡ್‌ನಿಂದ ಕೈಯನ್ನು ಹರಿದುಕೊಂಡು ರಕ್ತ ಸುರಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು ಸ್ಥಳದಲ್ಲಿದ್ದ ಇತರ ಕಾರ್ಯಕರ್ತರು ಆತನನ್ನು ರಕ್ಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

44 ಸೆಕೆಂಡ್‌ನಲ್ಲಿ 72 ರಾಕೆಟ್‌ ಲಾಂಚ್‌ ಮಾಡುವ ಘಾತಕ ರಾಕೆಟ್‌ ಸಿಸ್ಟಮ್‌ಅನ್ನು ಪ್ರಮುಖ ದೇಶಕ್ಕೆ ಮಾರಿದ ಭಾರತ!
ಬಿಗ್‌ ಬಾಸ್ ವಿಜೇತ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ: ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಕಾವೇರಿ!