ಬಿಜೆಪಿಯಿಂದ ಮಹಾ ತುರ್ತು ಪರಿಸ್ಥಿತಿಯಂತೆ: ನಿಲ್ಲದ ಮಮತಾ ಅಂತೆ ಕಂತೆ!

Published : Aug 02, 2018, 08:01 PM IST
ಬಿಜೆಪಿಯಿಂದ ಮಹಾ ತುರ್ತು ಪರಿಸ್ಥಿತಿಯಂತೆ: ನಿಲ್ಲದ ಮಮತಾ ಅಂತೆ ಕಂತೆ!

ಸಾರಾಂಶ

ಬಿಜೆಪಿ ವಿರುದ್ಧ ತೊಡೆ ತಟ್ಟಿದ ಮಮತಾ ಬ್ಯಾನರ್ಜಿ! ದೇಶದಲ್ಲಿ ಮಹಾ ತುರ್ತು ಪರಿಸ್ಥಿತಿ ಆರೋಪ! ಟಿಎಂಸಿ ನಿಯೋಗಕ್ಕೆ ವಿಮಾನ ನಿಲ್ದಾಣದಲ್ಲೇ ತಡೆ! ಅಸ್ಸೋಂ ಸರ್ಕಾರದ ವಿರುದ್ಧ ಮಮತಾ ಗರಂ

ಕೋಲ್ಕತ್ತಾ(ಆ.2): ನಾಗರಿಕರ ರಾಷ್ಟ್ರೀಯ ನೋಂದಣಿ ವಿಷಯ ಮುಂದಿಟ್ಟುಕೊಂಡು ಬಿಜೆಪಿ ದೇಶದಲ್ಲಿ ಸೂಪರ್ ಎಮರ್ಜೆನ್ಸಿ(ಮಹಾ ತುರ್ತು ಪರಿಸ್ಥಿತಿ)ಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ಟಿಎಂಸಿ ಪಕ್ಷದ ನಿಯೋಗವೊಂದು ಇಂದು ಅಸ್ಸೋಂಗೆ ಭೇಟಿ ನೀಡಿತ್ತು. ಆದರೆ ಈ ನಿಯೋಗವನ್ನು ವಿಮಾನ ನಿಲ್ದಾಣದಲ್ಲೇ ತಡೆ ಹಿಡಿಯಲಾಯಿತು. ರಾಜ್ಯ ಸರ್ಕಾರದ ಈ ನಡೆಯನ್ನು ಮಮತಾ ತೀವ್ರವಾಗಿ ಟೀಕಿಸಿದ್ದಾರೆ. 

ಅಕ್ರಮ ವಲಸಿಗರ ನೆಪದಲ್ಲಿ ಜನರಿಗೆ ತೊಂದರೆ ಕೊಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಅಸ್ಸೋಂ ಜನರ ಸಂಕಷ್ಟವನ್ನು ಅರಿಯಲೂ ನಮಗೆ ಅವಕಾಶ ಕೊಡುತ್ತಿಲ್ಲ ಎಂದು ಮಮತಾ ಹರಿಹಾಯ್ದಿದ್ದಾರೆ.

ಬಿಜೆಪಿ ಅದ್ಹೆಗೆ ಎನ್ ಆರ್ ಸಿ ಜಾರಿಗೊಳಿಸುತ್ತದೆಯೋ ನಾವೂ ನೋಡಿಯೇ ಬಿಡುವುದಾಗಿ ಮಮತಾ ಇದೇ ವೇಳೆ ಸವಾಲು ಹಾಕಿದ್ದಾರೆ. ತಮ್ಮ ಪಕ್ಷದ ನಿಯೋಗವನ್ನು ವಿಮಾನ ನಿಲ್ದಾಣದಲ್ಲೇ ತಡೆಯುವ ಮೂಲಕ ಬಿಜೆಪಿ ದೇಶದಲ್ಲಿ ಮಹಾ ತುರ್ತು ಪರಿಸ್ಥಿತಿಯನ್ನು ಹೇರಲು ಹುನ್ನಾರ ನಡೆಸಿದೆ ಎಂದು ಮಮತಾ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗದ ಭ್ರಷ್ಟ ತಿಮಿಂಗಲ; ಕೈತುಂಬಾ ಚಿನ್ನ, ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ
ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡದ ಪ್ರತಿ ಸದಸ್ಯರಿಗೆ ಸಿಯೆರಾ ಕಾರು ಗಿಫ್ಟ್ ಕೊಟ್ಟ ಟಾಟಾ