ಮಂತ್ರಿ ಸ್ಥಾನಕ್ಕಾಗಿ BSY ಕಾಲಿಗೆ ಬಿದ್ದ ಮುಖಂಡರು

Published : Aug 15, 2019, 01:17 PM ISTUpdated : Aug 15, 2019, 02:38 PM IST
ಮಂತ್ರಿ ಸ್ಥಾನಕ್ಕಾಗಿ  BSY ಕಾಲಿಗೆ ಬಿದ್ದ ಮುಖಂಡರು

ಸಾರಾಂಶ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ  ಒಂದು ತಿಂಗಳು ಕಳೆಯುತ್ತಿದೆ. ಇನ್ನಾದರೂ ಸಚಿವ ಸಂಪುಟ ವಿಸ್ತರಣೆಯಾಗದ ಕಾರಣ ಸಚಿವ ಸ್ಥಾನಕ್ಕಾಗಿ ಲಾಬಿ ಶುರುವಾಗಿದೆ. 

ಬೆಂಗಳೂರು [ಆ.15] : ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ಕೂಡ ಸಂಪುಟ ವಿಸ್ತರಣೆಯಾಗದ ಕಾರಣ ಮಂತ್ರಿಗಿರಿಗಾಗಿ ಲಾಬಿ ಜೋರಾಗಿದೆ. 

ಗುರುಮಠಕಲ್ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಾಬೂರಾವ್ ಚಿಂಚನಸೂರ್ ಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಬೆಂಬಲಿಗರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಲಿಗೆ ಬಿದ್ದಿದ್ದಾರೆ.  

ನಮ್ಮ ನಾಯಕನಿಗೆ ಸಚಿವ ಸ್ಥಾನ ಕೊಡಿ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ.  ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಕೂಡ ಇವರ ಪಾತ್ರ ಮಹತ್ವದ್ದಾಗಿದೆ. ಆದ್ದರಿಂದ ಮಂತ್ರಿ ಸ್ಥಾನ ನೀಡಬೇಕು. ಈ ಹಿಂದೆ ನೀಡಿದ ಭರವಸೆಯನ್ನು ಈಡೇರಿಸಬೇಕು ಎಂದು ಕೇಳಿದರು. 

ಮಾಜಿ ಶಾಸಕರಾದ ಚಿಂಚನಸೂರ್ ಅವರಿಗೆ MLC ಸ್ಥಾನ ನೀಡುವ ಮೂಲಕ ಸಚಿವ ಸ್ಥಾನ ನೀಡಲು ಕೇಳಿಕೊಂಡಿದ್ದಾರೆ. 

BSY ಸಂಪುಟ ಸೇರ್ತಾರಾ ಅನರ್ಹ ಶಾಸಕ ?

ಕೊಟ್ಟ ಮಾತನ್ನು ಉಳಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಕಾಲಿಗೆ ಬೀಳುವ ಮೂಲಕ ಯಡಿಯೂರಪ್ಪಗೆ ಚಿಂಚನಸೂರು ಬೆಂಬಲಿಗರು ಮನವಿ ಮಾಡಿದರು. 

10 ಕೋಟಿ ಕೊಟ್ಟರೆ ಗ್ರಾಮಕ್ಕೆ ದಾನಿ ಹೆಸರು : BSY

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನೀವು ಈ ಬಗ್ಗೆ ಬಂದು ಕೇಳುವ ಅಗತ್ಯವಿಲ್ಲ. ಈ ವಿಚಾರವನ್ನು ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸುತ್ತೇನೆ. ನನ್ನ ಪ್ರಯತ್ನ ನಾನು ಮಾಡುತ್ತೇನೆ ಎಂದು ಚಿಂಚನಸೂರು ಬೆಂಬಲಿಗರಿಗೆ ಬಿ ಎಸ್ ವೈ ಭರವಸೆ ನೀಡಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!