ನೋಟು ನಿಷೇಧ: ವಿಚಾರಣೆಯನ್ನು ಮುಂದೂಡಿದ ಸುಪ್ರೀಂ

Published : Dec 05, 2016, 06:22 AM ISTUpdated : Apr 11, 2018, 12:46 PM IST
ನೋಟು ನಿಷೇಧ: ವಿಚಾರಣೆಯನ್ನು ಮುಂದೂಡಿದ ಸುಪ್ರೀಂ

ಸಾರಾಂಶ

ಕೇಂದ್ರ ಸರ್ಕಾರ ಕೈಗೊಂಡಿರುವ ನೋಟು ಅಮಾನ್ಯ ಕ್ರಮದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 9ಕ್ಕೆ ಮುಂದೂಡಿದೆ.

ನವದೆಹಲಿ (ಡಿ.5): ಕೇಂದ್ರ ಸರ್ಕಾರ ಕೈಗೊಂಡಿರುವ ನೋಟು ಅಮಾನ್ಯ ಕ್ರಮದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 9ಕ್ಕೆ ಮುಂದೂಡಿದೆ.

ಕೇಂದ್ರ ಸರ್ಕಾರ ನೋಟು ಅಮಾನ್ಯ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್'ನಲ್ಲಿ ದಾವೆ ದಾಖಲಾಗಿದೆ.

ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ಕಳೆದ ವಿಚಾರಣೆಗಳ ಸಂದರ್ಭದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

"ಇದು ನಿಜಕ್ಕೂ ಗಂಭೀರವಾದುದು. ಇದು ಪರಿಗಣಿಸಲೇಬೇಕಾಗುವಂಥದ್ದು. ಜನರು ತೊಂದರೆಯಾಗಿದೆ. ಅವರು ಹತಾಶರಾಗಿದ್ದಾರೆ. ಗಲಭೆಯಾದರೂ ಆಗಬಹುದು" ಎಂದು ಮುಖ್ಯನ್ಯಾಯಮೂರ್ತಿ ಟಿಎಸ್ ಠಾಕೂರ್ ಮತ್ತು ನ್ಯಾ| ಅನಿಲ್ ಆರ್.ದಾವೆ ನ್ಯಾಯಪೀಠವು ಸರ್ಕಾರವನ್ನು ಎಚಚರಿಸಿತ್ತು.

500 ಮತ್ತು 1000 ರೂಪಾಯಿ ನೋಟುಗಳ ರದ್ದತಿಯನ್ನು ಪ್ರಶ್ನಿಸಿ ದೇಶದ ವಿವಿಧ ಕೋರ್ಟ್​ಗಳಲ್ಲಿ ಹೂಡಲಾಗಿರುವ ಪ್ರಕರಣಗಳಿಗೆ ತಡೆ ನೀಡಲು ಸುಪ್ರೀಂಕೋರ್ಟ್​ ನಿರಾಕರಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ