ಉರುಳಿದ ಮೈತ್ರಿ ಸರ್ಕಾರ: ಈ ಶಾಸಕರ ಅರ್ಜಿಗಿಲ್ಲ ಸುಪ್ರೀಂನಲ್ಲಿ ಕಿಮ್ಮತ್ತು

Published : Jul 24, 2019, 12:03 PM ISTUpdated : Jul 24, 2019, 12:14 PM IST
ಉರುಳಿದ ಮೈತ್ರಿ ಸರ್ಕಾರ: ಈ ಶಾಸಕರ ಅರ್ಜಿಗಿಲ್ಲ ಸುಪ್ರೀಂನಲ್ಲಿ ಕಿಮ್ಮತ್ತು

ಸಾರಾಂಶ

ವಿಶ್ವಾಸಮತ ಯಾಚನೆ ಪ್ರಕ್ರಿಯೆ ವಿಳಂಬ, ಇಬ್ಬರು ಶಾಸಕರ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ| ವಿಚಾರಣೆ ಕೈಗೆತ್ತಿಕೊಂಡರೂ ಮಹತ್ವವಿಲ್ಲ| ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣ, ಕುಮಾರಸ್ವಾಮಿ ಸರ್ಕಾರ ಪತನ

ನವದೆಹಲಿ[ಜು. 24] ಕರ್ನಾಟಕ ವಿಧಾನಸಭೆಯಲ್ಲಿ ಸೋಮವಾರ ಸಂಜೆ 5 ಗಂಟೆಯೊಳಗೆ ಸ್ಪೀಕರ್ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಸಬೇಕು ಎಂದು ಸುಪ್ರೀಂ ಮೊರೆ ಹೋಗಿದ್ದ ಪಕ್ಷೇತರ ಶಾಸಕರಾದ ನಾಗೇಶ್ ಹಾಗೂ ಕೆಪಿಜೆಪಿಯ ಶಂಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ

ಮಂಗಳವಾರ ಸಂಜೆ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತ ಯಾಚಿಸಿದ್ದು, ಈ ಅಗ್ನಿಪರೀಕ್ಷೆಯಲ್ಲಿ ವಿಫಲಗೊಂಡಿದ್ದ ಪರಿಣಾಮ ಸರ್ಕಾರ ಪತನಗೊಂಡಿದೆ. ಹೀಗಾಗಿ ಒಂದು ವೇಳೆ ಪಕ್ಷೇತರ ಶಾಸಕ ಎನ್‌ ನಾಗೇಶ್ ಹಾಗೂ ಕೆಪಿಜೆಪಿಯ ಆರ್‌ ಶಂಕರ್ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬಂದರೂ ಮಹತ್ವ ಕಳೆದುಕೊಳ್ಳಲಿದೆ.

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಕಳೆದ ಮೂರು ವಾರಗಳಿಂದ ಏನೇನಾಯ್ತು?

ಇದಕ್ಕೂ ಮೊದಲು ಅಂದರೆ ಮಂಗಳವಾರ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ನೇತೃತ್ವದ ಪೀಠ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಪಕ್ಷೇತರ ಶಾಸಕರಾದ ನಾಗೇಶ್‌ ಹಾಗೂ ಕೆಪಿಜೆಪಿಯ ಶಂಕರ್‌ ಪರ ವಕೀಲ ಮುಕುಲ್ ರೋಹ್ಟಗಿ ಹಾಗೂ ಸ್ಪೀಕರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿಯವರು ಸುಪ್ರೀಂನಲ್ಲಿ ವಾದ-ಪ್ರತಿವಾದ ಮಂಡಿಸಿದ್ದರು. ಅಲ್ಲದೇ ಮಂಗಳವಾರ ಸಂಜೆ 6 ಗಂಟೆಯೊಳಗಾಗಿ ವಿಶ್ವಾಸಮತಯಾಚನೆ ಪ್ರಕ್ರಿಯೆ ಮುಗಿಸುವುದಾಗಿ ಸ್ಪೀಕರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ  ಮನವಿ ಮಾಡಿಕೊಂಡಿದ್ದರು.

ಬಳಿಕ ಸ್ಪೀಕರ್ ಕೊಟ್ಟ ಮಾತಿನಂತೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಸಿದ್ದರು. ಈ ಅಗ್ನಿಪರೀಕ್ಷೆಯಲ್ಲಿ ಎಚ್. ಡಿ. ಕುಮಾರಸ್ವಾಮಿ ಕೇವಲ 5 ಸದಸ್ಯರ ಮತಗಳ ಕೊರತೆಯಿಂದ ಫೇಲಾಗಿದ್ದರು. ಇದರ ಬೆನ್ನಲ್ಲೇ ವಿಧಾನಸಭೆಯಿಂದ ನಿರ್ಗಮಿಸಿದ್ದ ಕುಮಾರಸ್ವಾಮಿ ರಾಜ್ಯಪಾಲರ ಬಳಿ ತೆರಳಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಈ ರಾಜೀನಾಮೆ ಪತ್ರ ಸ್ವೀಕರಿಸಿದ್ದ ರಾಜ್ಯಪಾಲ ವಜುಭಾಯಿವಾಲಾ ಮತ್ತೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವವರೆಗೂ ಕುಮಾರಸ್ವಾಮಿಯನ್ನು ಕೇರ್ ಟೇಕರ್ ಚೀಫ್ ಮಿನಿಸ್ಟರ್ ಆಗಿ ನೇಮಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?