ಸಿಬಿಐನಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ: ವಿಚಾರಣೆ ಮುಂದೂಡಿದ ಸುಪ್ರೀಂ

Published : Nov 20, 2018, 12:05 PM IST
ಸಿಬಿಐನಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ: ವಿಚಾರಣೆ ಮುಂದೂಡಿದ ಸುಪ್ರೀಂ

ಸಾರಾಂಶ

ಕೇಂದ್ರ ತನಿಖಾ ದಳ(ಸಿಬಿಐ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ?

ನವದೆಹಲಿ,[ನ.20]: ಕೇಂದ್ರ ತನಿಖಾ ದಳ(ಸಿಬಿಐ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 29ಕ್ಕೆ ಮುಂದೂಡಿದೆ.

 ಇಂದು [ಮಂಗಳವಾರ] ವಿಚಾರಣೆ ವೇಳೆ ಅಲೋಕ್​​ ವರ್ಮಾ ವಿರುದ್ಧ ಆರೋಪಗಳ ಬಗ್ಗೆ ಸಿವಿಸಿ ನೀಡಿರುವ ವರದಿ ಹಾಗೂ ಅದಕ್ಕೆ ಅಲೋಕ್​ ವರ್ಮಾ ಅವರು ನೀಡಿರುವ ಪ್ರತಿಕ್ರಿಯೆ ಮಾಧ್ಯಮದಲ್ಲಿ ಸೋರಿಕೆಯಾಗಿರುವ ಕುರಿತು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಗೊಗೋಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲೋಕ್ ವರ್ಮಾ ಬಂಡಾಯ: ಮೋದಿಗೆ ರಾಜನಾಥ್ ಕಜ್ಜಾಯ?

ಎಲ್ಲಾ ದಾಖಲೆಗಳನ್ನ ಮುಚ್ಚಿದ ಲಕೋಟೆಯಲ್ಲಿ ನೀಡಲಾಗಿತ್ತು. ಅದರೂ ಮಾಹಿತಿ ಸೋರಿಕೆಯಾಗಿದ್ದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಗೊಗೋಯಿ ಅವರು, ಇಂದು ವಿಚಾರಣೆ ನಡೆಯುವುದಿಲ್ಲ ಎಂದು ಹೇಳಿ  ವಿಚಾರಣೆಯನ್ನು ನವೆಂಬರ್​ 29ಕ್ಕೆ ಮುಂದೂಡಿದರು.

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತನ್ನನ್ನು ಕಡ್ಡಾಯ ರಜೆ ಮೇಲೆ ಕಳಿಸಿರುವ ಕೇಂದ್ರ ಸರ್ಕಾರದ ನಡೆ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್​ ವರ್ಮಾ ಸಲ್ಲಿಸಿರುವ ಅರ್ಜಿಯ ವಿಚಾರಣೆ  ಸುಪ್ರೀಂ ಕೋರ್ಟ್​​ನಲ್ಲಿ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಲಿಗಳು 7 ಕೋಟಿ ರು. ಮೌಲ್ಯದ 26000 ಟನ್‌ ಭತ್ತ ತಿಂದು ತೇಗಿದವಂತೆ! ಅಕ್ಕಿ ನಾಪತ್ತೆಗೆ ಸರ್ಕಾರದ ಉತ್ತರ
ಇನ್ಮುಂದೆ Zepto, Blinkit, Swiggy 10 ನಿಮಿಷದ ಡೆಲಿವರಿ ಸಿಗಲ್ಲ: ಸರ್ಕಾರದ ಆದೇಶ! ಖುಷಿಯಿಂದ ಒಪ್ಕೊಂಡ ಗ್ರಾಹಕರು