ಬಡ್ತಿ ಮೀಸಲಾತಿ ಮುಂದುವರಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Published : Jun 05, 2018, 12:43 PM IST
ಬಡ್ತಿ ಮೀಸಲಾತಿ ಮುಂದುವರಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಸಾರಾಂಶ

ಬಡ್ತಿ ಮೀಸಲಾತಿಯಲ್ಲಿ ಬದಲಾವಣೆ ತರಲು ಹೊರಟ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸದ್ಯ ಇರೋ ನಿಯಮದ ಪ್ರಕಾರ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡಕ್ಕೆ ಮೀಸಲಾತಿ ಆಧಾರದಲ್ಲಿ ಬಡ್ತಿ ನೀಡೋ ನಿಯಮವನ್ನ ಮುಂದುವರಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ.  

ದೆಹಲಿ(ಜೂನ್.5): ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಉದ್ಯೋಗಿಗಳಿಗೆ ಮೀಸಲಾತಿ ಆಧಾರದಲ್ಲಿ ಬಡ್ತಿ ನೀಡೋ ಕಾನೂನು ಮುಂದುವರಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಬಡ್ತಿ ಮೀಸಲಾತಿ ಸಂವಿಧಾನದಲ್ಲಿ ಬದಲಾವಣೆಯಾಗೋ ವರೆಗೂ ಯಥಾಸ್ಥಿತಿ ಕಾಪಾಡಿಕೊಳ್ಳಲು ಸುಪ್ರೀಂ ಸೂಚಿಸಿದೆ.

ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಉಪಯುಕ್ತವಲ್ಲ ಎಂಬ ಸರ್ಕಾರದ ವಾದಕ್ಕೆ ಸದ್ಯಕ್ಕೆ ತಡೆ ಬಿದ್ದಿದೆ. ಸದ್ಯದ ಕಾನೂನಿನ ಪ್ರಕಾರ ಮೀಸಲಾತಿ ಆಧಾರದಲ್ಲಿ ಬಡ್ತಿ ನೀಡಲಾಗುತ್ತಿದೆ. ಹೀಗಾಗಿ ಸದ್ಯ ಇದನ್ನೇ ಮುಂದುವರಿಸಲು ಕೋರ್ಟ್ ಸೂಚಿಸಿದೆ.

ಬಡ್ತಿ ಮೀಸಲಾತಿಗಾಗಿ ಸದ್ಯದ ನಿಯಮ ಪಾಲಿಸಲು ಕೋರ್ಟ್ ಸೂಚಿಸಿದೆ. ಆದರೆ ಸುಪ್ರೀಂ ಕೋರ್ಟ್ ನೀಡಿರೋ ಆದೇಶದಲ್ಲಿ ಯಾವ ನಿಮಯ ಪಾಲಿಸಬೇಕೆಂಬ ಕುರಿತು ಸ್ಪಷ್ಟತೆ ಇಲ್ಲ ಎಂದು ಆಡಿಶನ್ ಸಾಲಿಸಿಟ್ ಜನರಲ್ ಮನೀಂದರ್ ಸಿಂಗ್ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌