ನವದೆಹಲಿ (ಸೆ.27): ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಶ್ವ ಭಾರತಿ ಹೌಸಿಂಗ್ ಸೊಸೈಟಿ, ಜಂತಕಲ್ ಮೈನಿಂಗ್ ಗುತ್ತಿಗೆ ಹಗರಣ ಪ್ರಕರಣದ ಮರು ವಿಚಾರಣೆಗೆ ಸುಪ್ರಿಂಕೋರ್ಟ್ ಆದೇಶ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ವಿಚಾರಣೆ ಎದುರಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ತಾಕೀತು ಮಾಡಿದೆ.
ಎಚ್ಡಿಕೆ ದಂಪತಿ ವಿರುದ್ಧದ ಈ ಪ್ರಕರಣವನ್ನ ಹೈಕೋರ್ಟ್ ರದ್ದುಪಡಿಸಿತ್ತು. ಈ ಆದೇಶ ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಖುದ್ದು ಹಾಜರಾಗುವಂತೆ ಸೂಚಿಸಿದೆ.