ಪದ್ಮಾವತಿ ಚಿತ್ರತಂಡದ ನಿಂದನೆ ಆರೋಪಕ್ಕೆ ಸಿಎಂ, ಸಚಿವರ ವಿರುದ್ಧ ಸುಪ್ರೀಂ ಗರಂ

Published : Nov 28, 2017, 02:06 PM ISTUpdated : Apr 11, 2018, 12:44 PM IST
ಪದ್ಮಾವತಿ ಚಿತ್ರತಂಡದ ನಿಂದನೆ ಆರೋಪಕ್ಕೆ ಸಿಎಂ, ಸಚಿವರ ವಿರುದ್ಧ ಸುಪ್ರೀಂ ಗರಂ

ಸಾರಾಂಶ

ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರು ಆಗಿರುವ ಸಂಜಯ್ ಲೀಲಾ ಬನ್ಸಾಲಿ ಸಿಬಿಎಸ್'ಸಿ'ಯಿಂದ ಪ್ರಮಾಣಿತವಾಗಿ ಬರುವವರೆಗೂ ಇತರ ದೇಶಗಳಲ್ಲಿಯೂ ಬಿಡುಗಡೆ ಮಾಡುವುದಿಲ್ಲ ಎಂದು ಕೋರ್ಟ್'ಗೆ ತಿಳಿಸಿದ ಅವರು ಡಿಸೆಂಬರ್ 1 ರಂದು ಸಾಗರೋತ್ತರ ದೇಶಗಳಲ್ಲಿ ಬಿಡುಗಡೆಯಾಗುವ ಸುದ್ದಿಯನ್ನು ತಳ್ಳಿಹಾಕಿದರು.

ನವದೆಹಲಿ(ನ.28): ಬಾಲಿವುಡ್ ಸಿನಿಮಾ 'ಪದ್ಮಾವತಿ' ಚಿತ್ರತಂಡದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಬೆದರಿಕೆ ಒಡ್ಡುತ್ತಿರುವ ಮುಖ್ಯಮಂತ್ರಿಗಳು, ಸಚಿವರುಗಳು ಹಾಗೂ ಹಲವು ರಾಜಕೀಯ ಮುಖಂಡರ ವಿರುದ್ಧ ಗರಂ ಆಗಿರುವ ಸುಪ್ರಿಂ ಕೋರ್ಟ್ ' ಟೀಕೆ ಮಾಡುವ ಇಂತಹ ವ್ಯಕ್ತಿಗಳು ಸಿಬಿಎಸ್'ಸಿಯಿಂದ ಪ್ರಮಾಣಪತ್ರ ಬರುವವರೆಗೂ ಶಾಂತ ರೀತಿಯಿಂದ ವರ್ತಿಸಬೇಕು ಎಂದು ಚಾಟಿ ಬೀಸಿದೆ.

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಚಿತ್ರತಂಡದ ವಿರುದ್ಧ ಯಾವುದೇ ಅಧಿಕೃತ ಆಧಾರವಿಲ್ಲದೆ ಅರೋಪವನ್ನು ಹೊರಿಸುವುದು,ಸಮಾಜದಲ್ಲಿ ಅಶಾಂತಿ ಕದಡುವುದು ಕಾನೂನಿಗೆ ವಿರುದ್ಧವಾಗಿದೆ' ಎಂದು  ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ ಕಾಣ್'ವೀಲ್ಕಕರ್, ಡಿ.ವೈ ಚಂದ್ರಚೂಡ್  ಅವರಿದ್ದ ನ್ಯಾಯಪೀಠ ತಿಳಿಸಿದೆ.

ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೋಡಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಪೀಠ ಇದೊಂದು ನಿಷ್ಪ್ರಯೋಜಕ ಅರ್ಜಿ ಎಂದು ವಜಾಗೊಳಿಸಿತು. ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರು ಆಗಿರುವ ಸಂಜಯ್ ಲೀಲಾ ಬನ್ಸಾಲಿ ಸಿಬಿಎಸ್'ಸಿ'ಯಿಂದ ಪ್ರಮಾಣಿತವಾಗಿ ಬರುವವರೆಗೂ ಇತರ ದೇಶಗಳಲ್ಲಿಯೂ ಬಿಡುಗಡೆ ಮಾಡುವುದಿಲ್ಲ ಎಂದು ಕೋರ್ಟ್'ಗೆ ತಿಳಿಸಿದ ಅವರು ಡಿಸೆಂಬರ್ 1 ರಂದು ಸಾಗರೋತ್ತರ ದೇಶಗಳಲ್ಲಿ ಬಿಡುಗಡೆಯಾಗುವ ಸುದ್ದಿಯನ್ನು ತಳ್ಳಿಹಾಕಿದರು.

ಒಂದು ಸಮುದಾಯಕ್ಕೆ ಸಿನಿಮಾದಲ್ಲಿ ಅಗೌರವ ತೋರಲಾಗಿದೆ ಎಂದು ದೇಶದ ವಿವಿಧ ಕಡೆ ಪದ್ಮಾವತಿ ಚಿತ್ರತಂಡದ ವಿರುದ್ಧ ಪ್ರತಿಭಟನೆಗಳು ನಡೆದಿತ್ತು. ಕಲಾವಿದರ ವಿರುದ್ಧ ರಾಜಕೀಯ ನಾಯಕರು ಸೇರಿದಂತೆ ಹಲವರು ಬೆದರಿಕೆ ಒಡ್ಡಿದ್ದರು.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ