
ನವದೆಹಲಿ(ಮಾ.13): ಬ್ಯಾಂಕ್ ಖಾತೆಗಳು, ಮೊಬೈಲ್, ಪಾನ್ ಕಾರ್ಡ್, ಪಾಸ್'ಪೋರ್ಟ್ ಸೇರಿದಂತೆ ವಿವಿಧ ಸೇವೆಗಳಿಗೆ ಸಂಖ್ಯೆಗಳಿಗೆ ಆಧಾರ್ ಸಂಖ್ಯೆಗಳ ಗಡುವನ್ನು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಬರುವವರೆಗೂ ವಿಸ್ತರಿಸಿದೆ.
ಈ ಮೊದಲು ಮಾರ್ಚ್ 31ರವರೆಗೂ ಗಡುವು ನೀಡಲಾಗಿತ್ತು. ಆದಾಗ್ಯೂ ಸಮಾಜ ಕಲ್ಯಾಣ ಯೋಜನೆಗಳಿಗೆ ಕಾಯಿದೆ 7ರ ಅನ್ವಯ ಕಡ್ಡಾಯಗೊಳಿಸಲಾಗಿದೆ. ಮುಖ್ಯ ನ್ಯಾಯಾಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಪೀಠ ಸೂಚಿಸಿದೆ.
ಮಾರ್ಚ್ 31ರವರೆಗೆ ಗಡುವು ನೀಡಿದ ಕಾರಣ ಮೊಬೈಲ್ ಕಂಪನಿಗಳು ಸೇರಿದಂತೆ ಹಲವು ಸೇವೆಗಳ ಕಂಪನಿಗಳು ತಮ್ಮ ಗ್ರಾಹಕರಿಗೆ 12 ಸಂಖ್ಯೆಗಳ ಆಧಾರ್ ಜೋಡಣೆಗೊಳಿಸಬೇಕೆಂದು ತಮ್ಮ ಗ್ರಾಹಕರಿಗೆ ಕರೆ, ಸಂದೇಶಗಳ ಮೂಲಕ ಸೂಚಿಸುತ್ತಿದ್ದವು. ಇತ್ತೀಚಿಗಷ್ಟೆ ಕೈಗಾರಿಕಾ ಸಂಸ್ಥೆ ಅಸೋಚಾಮ್ ಗಡುವನ್ನು ವಿಸ್ತರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿತ್ತು. ಮಾರ್ಚ್ 2017ರ ವೇಳೆಗೆ ಭಾರತದಲ್ಲಿ 114 ಕೋಟಿ ಭಾರತಿಯರು ಆಧಾರ್ ಕಾರ್ಡ್'ಅನ್ನು ಹೊಂದಿದ್ದಾರೆ. 102 ಕೋಟಿ ಮಂದಿ ನೋಂದಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.