ರಾಜ್ಯ ಸರ್ಕಾರಕ್ಕೆ ಮುಖಭಂಗ, ರಾಮಚಂದ್ರಾಪುರ ಮಠದ ತೆಕ್ಕೆಗೆ ಗೋಕರ್ಣ ದೇಗುಲ

Published : Nov 01, 2018, 04:43 PM ISTUpdated : Nov 01, 2018, 04:55 PM IST
ರಾಜ್ಯ ಸರ್ಕಾರಕ್ಕೆ ಮುಖಭಂಗ, ರಾಮಚಂದ್ರಾಪುರ ಮಠದ ತೆಕ್ಕೆಗೆ ಗೋಕರ್ಣ ದೇಗುಲ

ಸಾರಾಂಶ

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ವಿವಾದದ ಕಾನೂನು ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ರಾಮಚಂದ್ರಾಪುರ ಮಠ ಮೇಲುಗೈ ಸಾಧಿಸಿದೆ.

ಬೆಂಗಳೂರು, ನ.01: ಕಾನೂನು ಹೋರಾಟದಲ್ಲಿ ರಾಮಚಂದ್ರಾಪುರ ಮಠಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ದೇವಸ್ಥಾನವನ್ನ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಇದ್ರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸೋಮವಾರದೊಳಗೆ ದೇವಾಲಯವನ್ನ ಮಠಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಇಂದು (ಗುರುವಾರ) ಮಹತ್ವದ ಆದೇಶ ಹೊರಡಿಸಿದೆ.

 ಈ ಹಿಂದೆ ರಾಮಚಂದ್ರಪುರ ಮಠದಿಂದ ಹಿಂಪಡೆದು ಸರ್ಕಾರ ವಶಕ್ಕೆ ನೀಡಿ ಹೈಕೋರ್ಟ್ ಆದೇಶ ನೀಡಿತ್ತು.ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಮೆಟ್ಟಿಲೇರಿದ್ದ ರಾಮಚಂದ್ರಪುರ ಮಠಕ್ಕೆ ಈಗ ಜಯ ಸಿಕ್ಕಿದ್ದು, ರಾಜ್ಯ ಸರ್ಕಾರದ ವಶದಿಂದ ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನ ರಾಮಚಂದ್ರಾಪುರ ಮಠ ತನ್ನ ಸುಪರ್ದಿಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಗೋಕರ್ಣ ದೇವಸ್ಥಾನ ಮಠಕ್ಕೆ ಹಸ್ತಾಂತರ ತಾತ್ಕಾಲಿಕ ಸ್ಥಗಿತ

ಬಿಎಸ್ ಯಡಿಯೂರಪ್ಪ ಸರ್ಕಾರ ಇದ್ದಾಗ ಗೋಕರ್ಣ ದೇಗುಲವನ್ನ ರಾಮಚಂದ್ರಪುರ ಮಠಕ್ಕೆ ನೀಡಲಾಗಿತ್ತು. ಬಳಿಕ ಹೈಕೋರ್ಟ್ ಗೋಕರ್ಣ ಮಹಾಬಲೇಶ್ವರ ದೇಗುಲವನ್ನ ರಾಜ್ಯ ಸರ್ಕಾರದ ವಶಕ್ಕೆ ನೀಡಿತ್ತು.

ಒಟ್ಟಿನಲ್ಲಿ ಗೋಕರ್ಣ ದೇಗುಲ ವಿವಾದದ ಕಾನೂನು ಹೋರಟದಲ್ಲಿ ರಾಮಚಂದ್ರಾಪುರ ಮಠ ಮೇಲುಗೈ ಸಾಧಿಸಿದಂತೂ ಸತ್ಯ.

"

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!