ಆಧಾರ್ ಸಿಂಧುತ್ವದ ಅರ್ಜಿ : ತೀರ್ಪು ಕಾಯ್ದಿರಿಸಿದ ಸುಪ್ರೀಂ

Published : May 11, 2018, 11:19 AM IST
ಆಧಾರ್ ಸಿಂಧುತ್ವದ ಅರ್ಜಿ : ತೀರ್ಪು ಕಾಯ್ದಿರಿಸಿದ ಸುಪ್ರೀಂ

ಸಾರಾಂಶ

ಆಧಾರ್ ಯೋಜನೆಯ ಸಾಂವಿಧಾನಿಕ ಸಿಂಧುತ್ವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಗುರುವಾರ  ಪೂರ್ಣಗೊಂಡಿದ್ದು, ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. 

ನವದೆಹಲಿ: ಆಧಾರ್ ಯೋಜನೆಯ ಸಾಂವಿಧಾನಿಕ ಸಿಂಧುತ್ವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಗುರುವಾರ  ಪೂರ್ಣಗೊಂಡಿದ್ದು, ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಮುಖ್ಯ ನ್ಯಾಯಾಧೀಶ ನ್ಯಾ| ದೀಪಕ್ ಮಿಶ್ರಾ, ನ್ಯಾ. ಎ.ಕೆ. ಸಿಕ್ರಿ, ನ್ಯಾ. ಎ.ಎಂ. ಕಾನ್ವಿಲ್ಕರ್, ನ್ಯಾ. ಡಿ.ವೈ. ಚಂದ್ರ ಚೂಡ ಹಾಗೂ ನ್ಯಾ. ಅಶೋಕ ಭೂಷಣ್ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠವು, ಇದರ ವಿಚಾರಣೆಯನ್ನು ಕಳೆದ 4 ತಿಂಗಳ ಅವಧಿಯ 38 ಕಲಾಪಗಳಲ್ಲಿ ಸತತವಾಗಿ ನಡೆಸಿತು.

ಗುರುವಾರ ಈ ಕುರಿತ ತೀರ್ಪನ್ನು ಕಾಯ್ದಿರಿಸಿತು. ತೀರ್ಪು ಯಾವಾಗ ಬರುತ್ತದೆ ಎಂಬ ದಿನಾಂಕವನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಸರ್ಕಾರದ ಪರ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ವಾದ ಮಂಡಿಸಿದರೆ, ಅರ್ಜಿದಾರರ ಪರ ಕಪಿಲ್ ಸಿಬಲ್, ಪಿ. ಚಿದಂಬರಂ, ರಾಕೇಶ್ ದ್ವಿವೇದಿ, ಶ್ಯಾಮ್ ದಿವಾನ್, ಅರವಿಂದ ದಾತಾರ್ ಅವರು ವಾದ ಮಂಡಿಸಿದರು. ಸರ್ಕಾರವು ವಿವಿಧ ಯೋಜನೆಗಳಿಗೆ ಆಧಾರ್ ಸಂಯೋಜನೆ ಸಮರ್ಥಿಸಿಕೊಂಡರೆ, ಅರ್ಜಿದಾರರು ವಿರೋಧಿಸಿದರು. \

ಮೂಲ ಅರ್ಜಿದಾರ ಕನ್ನಡಿಗ: ಅಂದಹಾಗೆ ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾ| ಕೆ.ಎಸ್. ಪುಟ್ಟಸ್ವಾಮಿ ಮೂಲ ಅರ್ಜಿದಾರರು. ಆಧಾರ್ ಕಡ್ಡಾಯದಿಂದ ಖಾಸಗಿತನಕ್ಕೆ ಧಕ್ಕೆ ಬರುತ್ತದೆ ಹಾಗೂ ಭದ್ರತೆಗೆ ಇದು ಅಪಾಯಕರ ಎಂಬುದು ಅವರ ವಾದ. ಆಧಾರ್ ಯೋಜನೆಗೆ ಸಾಂವಿಧಾನಿಕ ಸ್ವರೂಪ ನಿಟ್ಟಿನಲ್ಲಿ ಸರ್ಕಾರವು ೨೦೧೬ನೇ ಸಾಲಿನಲ್ಲೇ ಕಾಯ್ದೆ ಪಾಸು ಮಾಡಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ