
ನವದೆಹಲಿ (ಡಿ.15): ಸರ್ಕಾರದ ನಾನಾ ಸೌಲಭ್ಯಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ನೀಡಲಿದೆ.
ಆಧಾರ್ ಜೋಡಣೆಯ ಗಡುವನ್ನು ಕೇಂದ್ರವು 2018ರ ಮಾರ್ಚ್ 31ರವರೆಗೆ ಈಗಾಗಲೇ ವಿಸ್ತರಿಸಿದೆ. ಆಧಾರ್ಗೆ ಸಂಬಂಧಿಸಿದ ಅರ್ಜಿಗಳ ಅಂತಿಮ ವಿಚಾರಣೆ 2018ರ ಜನವರಿ 17ರಂದು ಆರಂಭವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಹೇಳಿದೆ. ಬ್ಯಾಂಕ್ನಲ್ಲಿ ಹೊಸ ಖಾತೆ ತೆರೆಯಲು ಆಧಾರ್ ಕಡ್ಡಾಯ ನಿಯಮ ಮುಂದುವರಿಕೆಗೆ ಅವಕಾಶ ಕೊಡಬೇಕು ಎಂದು ಕೇಂದ್ರದ ಪರ ವಾದಿಸಿದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ತಿಳಿಸಿದ್ದಾರೆ. ಮೊಬೈಲ್ಗೆ ಆಧಾರ್ ಜೋಡಣೆ ಮಾಡಲು 2018 ರ ಫೆಬ್ರುವರಿ 6 ಕೊನೆಯ ದಿನ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈ ಗಡುವು ನಿಗದಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.