ಕಲ್ಕತ್ತಾ ಹೈಕೋರ್ಟ್ ನ್ಯಾ. ಸಿ.ಎಸ್ ಕರ್ನನ್ ಗೆ ಜಾಮೀನುಸಹಿತ ವಾರಂಟ್ ಜಾರಿ

Published : Mar 10, 2017, 10:32 AM ISTUpdated : Apr 11, 2018, 12:41 PM IST
ಕಲ್ಕತ್ತಾ ಹೈಕೋರ್ಟ್ ನ್ಯಾ. ಸಿ.ಎಸ್ ಕರ್ನನ್ ಗೆ ಜಾಮೀನುಸಹಿತ ವಾರಂಟ್ ಜಾರಿ

ಸಾರಾಂಶ

ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕಲ್ಕತ್ತಾ ಹೈಕೋರ್ಟ್ ನ್ಯಾ. ಸಿಎಸ್ ಕರ್ನನ್ ಗೆ ಸುಪ್ರೀಂಕೋರ್ಟ್ ಜಾಮೀನುಸಹಿತ ವಾರಂಟ್ ನೀಡಿದೆ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ ಹಾಲಿ ಹಾಗೂ ನಿವೃತ್ತ ನ್ಯಾಯಾಧೀಶರಿಗೆ ದುರುದ್ದೇಶಪೂರಿತ ಪತ್ರ ಬರೆಯುತ್ತಿದ್ದರು ಎನ್ನುವ ಆರೋಪದ ಮೇರೆಗೆ ನ್ಯಾಯಾಂಗ ನಿಂದನೆ ಎದುರಿಸುತ್ತಿದ್ದರು.

ನವದೆಹಲಿ (ಮಾ.10): ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕಲ್ಕತ್ತಾ ಹೈಕೋರ್ಟ್ ನ್ಯಾ. ಸಿಎಸ್ ಕರ್ನನ್ ಗೆ ಸುಪ್ರೀಂಕೋರ್ಟ್ ಜಾಮೀನುರಹಿತ ವಾರಂಟ್ ನೀಡಿದೆ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ ಹಾಲಿ ಹಾಗೂ ನಿವೃತ್ತ ನ್ಯಾಯಾಧೀಶರಿಗೆ ದುರುದ್ದೇಶಪೂರಿತ ಪತ್ರ ಬರೆಯುತ್ತಿದ್ದರು ಎನ್ನುವ ಆರೋಪದ ಮೇರೆಗೆ ನ್ಯಾಯಾಂಗ ನಿಂದನೆ ಎದುರಿಸುತ್ತಿದ್ದರು.

ಮಾರ್ಚ್ 31 ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಖಚಿತಪಡಿಸಿಕೊಳ್ಳಿ ಎಂದು ಪ.ಬಂ. ಡಿಜಿಪಿಗೆ ಕೋರ್ಟ್ ಸೂಚಿಸಿದೆ.

ನ್ಯಾಯಾಂಗ ನಿಂದನೆ ನೋಟಿಸ್ ಗೆ ಪ್ರತಿಕ್ರಿಯಿಸಲು ಫೆ.08 ರಂದು  ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಗೈರು ಹಾಜರಾಗಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿ.ಎಸ್ ಕರ್ನನ್, ಸುಪ್ರೀಂಕೋರ್ಟ್ ನನ್ನ ಮೇಲೆ ಜಾಮೀನುರಹಿತ ವಾರಂಟ್ ಜಾರಿಗೊಳಿಸಿರುವುದು ನನ್ನ ಕರಿಯರ್ ಮತ್ತು ಜೀವನವನ್ನು ನಾಶ ಮಾಡುವ ಪ್ರಯತ್ನ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!