ವರದಕ್ಷಿಣೆ ಕಿರುಕುಳ ನೀಡಿದರೆ ಹುಷಾರ್ : ಸುಪ್ರೀಂನಿಂದ ಮಹತ್ವದ ಆದೇಶ

Published : Sep 15, 2018, 08:06 AM ISTUpdated : Sep 19, 2018, 09:26 AM IST
ವರದಕ್ಷಿಣೆ ಕಿರುಕುಳ ನೀಡಿದರೆ ಹುಷಾರ್ : ಸುಪ್ರೀಂನಿಂದ ಮಹತ್ವದ ಆದೇಶ

ಸಾರಾಂಶ

ಇನ್ನು ಮುಂದೆ ಯಾವುದೇ ಸಂತ್ರಸ್ತ ಮಹಿಳೆ ವರದಕ್ಷಿಣೆ ಕಿರುಕುಳ ದೂರು ನೀಡಿದಾಕ್ಷಣ ಪತಿ ಹಾಗೂ ಆತನ ಬಂಧುಗಳ ವಿರುದ್ಧ ಎಫ್‌ಐಆರ್ ದಾಖಲಾಗಲಿದೆ. ಬಂಧನ ಪ್ರಕ್ರಿಯೆಯೂ ನಡೆಯಲಿದೆ.

ನವದೆಹಲಿ: ‘ವರದಕ್ಷಿಣೆ ಕಿರುಕುಳ ಕುರಿತು ದೂರು ಬಂದಾಕ್ಷಣ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಿಸಿ, ಬಂಧನ ದಂತಹ ಕಾನೂನು ಪ್ರಕ್ರಿಯೆಗೆ ಇಳಿಯ ಕೂಡದು. ದೂರಿನ ಸತ್ಯಾಸತ್ಯತೆ ಪರಿಶೀಲಿಸಿ ಸಂಬಂಧಿಸಿದ ಸಮಿತಿ ಒಪ್ಪಿಗೆ ನೀಡಿದ ಬಳಿಕವಷ್ಟೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಕಳೆದ ವರ್ಷ ನೀಡಿದ್ದ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಶುಕ್ರವಾರ ಮಾರ್ಪಡಿಸಿದೆ. 

ಹೀಗಾಗಿ ಇನ್ನು ಮುಂದೆ ಯಾವುದೇ ಸಂತ್ರಸ್ತ ಮಹಿಳೆ ವರದಕ್ಷಿಣೆ ಕಿರುಕುಳ ದೂರು ನೀಡಿದಾಕ್ಷಣ ಪತಿ ಹಾಗೂ ಆತನ ಬಂಧುಗಳ ವಿರುದ್ಧ ಎಫ್‌ಐಆರ್ ದಾಖಲಾಗಲಿದೆ. 

ಬಂಧನ ಪ್ರಕ್ರಿಯೆಯೂ ನಡೆಯಲಿದೆ. ವರದಕ್ಷಿಣೆ ಕಿರುಕುಳ ತಡೆಯುವ ಸಂಬಂಧ ಇರುವ ಐಪಿಸಿ ಸೆಕ್ಷನ್ 498 ಎ ಕಳೆದ ವರ್ಷ  ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ದುರ್ಬಲಗೊಂಡಿದೆ ಎಂದು ದೂರಿ ಸಲ್ಲಿಕೆಯಾ ಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ, ಏ. 23 ರಂದು ತೀರ್ಪು ಕಾದಿರಿಸಿತ್ತು. ಶುಕ್ರವಾರ ತೀರ್ಪು ಪ್ರಕಟಿಸಿದ್ದು, ಕಳೆದ ವರ್ಷ ಜುಲೈನಲ್ಲಿ ನೀಡಿದ್ದ ತೀರ್ಪನ್ನು ಮಾರ್ಪಡಿಸಿ, ಬಂಧನ ಸೌಲಭ್ಯವನ್ನು ಸಂರಕ್ಷಿಸುವುದಾಗಿ ತಿಳಿಸಿದೆ.

ಇದೇ ವೇಳೆ, ದಂಡ ಸಂಹಿತೆ ಕಾನೂನಿನಲ್ಲಿರುವ ಕೊರತೆ  ಗಳನ್ನು ತುಂಬುವ ಸಾಂವಿಧಾನಿಕ ಪಾತ್ರ ನ್ಯಾಯಾಲಯ ಗಳಿಗೆ ಇಲ್ಲ ಎಂದು ಹೇಳಿದೆ. ಕಳೆದ ವರ್ಷ ತೀರ್ಪು ನೀಡಿದ್ದ ದ್ವಿಸದಸ್ಯ ಪೀಠ, ವರದಕ್ಷಿಣೆ ಕಿರುಕುಳ ತಡೆ ಕಾಯ್ದೆ ದುರ್ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ‘ಸಂತ್ರಸ್ತರು’ ದೂರು ನೀಡಿದಾಕ್ಷಣ ಬಂಧಿಸಬೇಕಿಲ್ಲ. ಎಫ್‌ಐಆರ್ ದಾಖಲಿಸಲೂಬೇಕಿಲ್ಲ. ಪರಿಣತರ ಸಮಿತಿ ರಚಿಸಿ, ದೂರಿನ ಸತ್ಯಾಸತ್ಯತೆ ಪರಿಶೀಲಿಸಿ ಕ್ರಮ ಜರುಗಿಸಬೇಕೆಂದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!