
ನವದೆಹಲಿ(ಅ.30) ದೀಪಾವಳಿ ಹತ್ತಿರವಾಗುತ್ತಿದ್ದು ದೀಪಗಳ ಹಬ್ಬ ದೀಪಾವಳೀ ಪಟಾಕಿ ಹಬ್ಬವಾಗಿ ವರ್ಷಗಳೆ ಕಳೆದಿವೆ. ನಿರಂತರವಾಗಿ ಪಟಾಕಿ ಸುಡುವುದು ಪರಿಸರ ಮತ್ತು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟುಮಾಡುತ್ತದೆ ಎಂಬುದನ್ನು ಮನಗಂಡಿದ್ದ ಸುಪ್ರೀಂ ಕೋರ್ಟ್ ಪಟಾಕಿ ಸುಡುವುದಕ್ಕೆ ಸಮಯ ನಿಗದಿ ಮಾಡಿತ್ತು.
ಆದರೆ ಇದೀಗ ತಮಿಳುನಾಡು ಸರ್ಕಾರದ ಮನವಿಯನ್ನು ಪರಿಗಣಿಸಿ ರಾಜ್ಯದಲ್ಲಿ ಪಟಾಕಿ ಸಿಡುವ ಸಮಯವನ್ನು ವಿಸ್ತರಣೆ ಮಾಡಿದೆ. ಹಬ್ಬದ ಸಂಭ್ರಮದ ವೇಳೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಬೇಕೆಂದು ನಿಬಂಧನೆಯನ್ನೂ ವಿಧಿಸಿತ್ತು.
ತಮಿಳುನಾಡಿನ ಮನವಿಗೆ ಮನ್ನಣೆ ನೀಡಲಾಗಿದ್ದು ದೀಪಾವಳಿ ಹಬ್ಬದ ದಿನದಂದು 4.30ರಿಂದ 6.30ರವರೆಗೂ ಪಟಾಕಿ ಸಿಡಿಸಲು ಅವಕಾಶ ಮಾಡಿಕೊಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.