ಮಹಿಳಾ ಜಡ್ಜ್’ಗೆ ಮಹಿಳೆಯರ ಕೇಸ್’ಗೆ ಅವಕಾಶವಿಲ್ಲ

Published : Jan 15, 2018, 10:59 AM ISTUpdated : Apr 11, 2018, 12:50 PM IST
ಮಹಿಳಾ ಜಡ್ಜ್’ಗೆ ಮಹಿಳೆಯರ ಕೇಸ್’ಗೆ ಅವಕಾಶವಿಲ್ಲ

ಸಾರಾಂಶ

ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆ ನಡೆಸಬೇಕಾದ ಸಾಂವಿಧಾನಿಕ ಪೀಠಗಳಿಂದ ಏಕೈಕ ಮಹಿಳಾ ನ್ಯಾಯಮೂರ್ತಿ ಆರ್. ಭಾನುಮತಿ ಅವರನ್ನು ಸುಪ್ರೀಂ ಕೋರ್ಟ್ ಹೊರಗಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ.

ನವದೆಹಲಿ(ಜ.15): ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆ ನಡೆಸಬೇಕಾದ ಸಾಂವಿಧಾನಿಕ ಪೀಠಗಳಿಂದ ಏಕೈಕ ಮಹಿಳಾ ನ್ಯಾಯಮೂರ್ತಿ ಆರ್. ಭಾನುಮತಿ ಅವರನ್ನು ಸುಪ್ರೀಂ ಕೋರ್ಟ್ ಹೊರಗಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ.

ಮಹತ್ವದ ಪ್ರಕರಣಗಳನ್ನು ಸರಿಯಾಗಿ ಹಂಚಿಕೆ ಮಾಡುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ನಾಲ್ವರು ನ್ಯಾಯಮೂರ್ತಿಗಳು ಬಂಡಾಯದ ಬಾವುಟ ಹಾರಿಸಿದ ಬೆನ್ನಲ್ಲೇ ಇಂತಹದ್ದೊಂದು ಬೆಳವಣಿಗೆ ನಡೆದಿದೆ.

ಎಂಟು ಸಾಂವಿಧಾನಿಕ ಪೀಠದಲ್ಲಿನ ಪ್ರಕರಣಗಳ ವಿಚಾರಣೆ ಜ.17ರಿಂದ ನಡೆಯಲಿದೆ ಎಂದು ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಪ್ರಕಟಿಸಿದೆ. ಆ ಎಂಟು ಪ್ರಕರಣಗಳಲ್ಲಿ ಋತುಚಕ್ರದಲ್ಲಿರುವ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರವೇಶ ಕಲ್ಪಿಸುವುದು ಹಾಗೂ ಅಕ್ರಮ ಸಂಬಂಧ ಪ್ರಕರಣಗಳಲ್ಲಿ ಮಹಿಳೆಯರನ್ನೂ ಅಪರಾಧಿ ಎಂದು ಘೋಷಿಸುವುದಕ್ಕೆ ಸಂಬಂಧಿಸಿದ ಮಹಿಳಾ ಕೇಂದ್ರಿತ ವಿಚಾರಗಳಿವೆ.

ಸುಪ್ರೀಂಕೋರ್ಟಿನಲ್ಲಿ ಏಕೈಕ ಮಹಿಳಾ ನ್ಯಾಯಮೂರ್ತಿ ಇದ್ದರೂ ಅವರನ್ನು ಮಹಿಳಾ ಕೇಂದ್ರಿತ ಪ್ರಕರಣಗಳಿಂದ ಹೊರಗಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ. ತ್ರಿವಳಿ ತಲಾಖ್ ಹಾಗೂ ಖಾಸಗಿತನದ ಹಕ್ಕಿಗೆ ಸಂಬಂಧಿಸಿದಂತೆ ರಚನೆಯಾಗಿದ್ದ ಸಾಂವಿಧಾನಿಕ ಪೀಠಗಳಿಂದಲೂ ಭಾನುಮತಿ ಅವರನ್ನು ಹೊರಗಿಡಲಾಗಿತ್ತು ಎಂಬುದು ಗಮನಾರ್ಹ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!