ಬಿಜೆಪಿ ನೇತೃತ್ವದ ಗೋವಾ ಸರ್ಕಾರಕ್ಕೆ ಸಂಕಷ್ಟ

Published : Jan 08, 2019, 10:18 AM ISTUpdated : Jan 08, 2019, 10:23 AM IST
ಬಿಜೆಪಿ ನೇತೃತ್ವದ ಗೋವಾ ಸರ್ಕಾರಕ್ಕೆ ಸಂಕಷ್ಟ

ಸಾರಾಂಶ

ಬಿಜೆಪಿ ನೇತೃತ್ವದ ಗೋವಾ ಸರ್ಕಾರಕ್ಕೆ ಇದೀಗ ಸಂಕಷ್ಟ ಎದುರಾಗಿದೆ. ಗೋವಾ ಸರ್ಕಾರಕ್ಕೆ ನ್ಯಾಯಯುತ ಸೂತ್ರ ಪಾಲಿಸಿಲ್ಲ ಎಂದು ಮಹಾದಾಯಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. 

ನವದೆಹಲಿ :  ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹದಾಯಿ ನದಿ ನ್ಯಾಯಾಧಿಕರಣವು ನ್ಯಾಯಯುತ ನೀರು ಹಂಚಿಕೆ ಸೂತ್ರವನ್ನು ಪಾಲಿಸಿಲ್ಲ ಎಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರ, ಗೋವಾ ಮತ್ತು ಕರ್ನಾಟಕ ಹಾಗೂ ಮಹಾರಾಷ್ಟ್ರಗಳಿಗೆ ನೋಟಿಸ್‌ ಜಾರಿ ಮಾಡಿದೆ. ಆರು ವಾರದೊಳಗೆ ಇದಕ್ಕೆ ಪ್ರತಿಕ್ರಿಯಿಸುವಂತೆ ಸೂಚಿಸಿದೆ.

ಪರ್ರಿಕರ್‌ಗೆ ಪ್ರಾಣಾಪಾಯ: ಭದ್ರತೆ ಕೋರಿ ರಾಷ್ಟ್ರಪತಿಗೆ ಕಾಂಗ್ರೆಸ್ ಪತ್ರ!

ಮಹದಾಯಿ ಕೊಳ್ಳದಲ್ಲಿ ಒಟ್ಟು 188 ಟಿಎಂಸಿ ನೀರು ಲಭ್ಯವಿದ್ದು, ಅದರಲ್ಲಿ ಕರ್ನಾಟಕಕ್ಕೆ 13.5 ಟಿಎಂಸಿ, ಗೋವಾಕ್ಕೆ 24 ಟಿಎಂಸಿ ಮತ್ತು ಮಹಾರಾಷ್ಟ್ರಕ್ಕೆ 1.33 ಟಿಎಂಸಿ ನೀರನ್ನು ನಿಗದಿಗೊಳಿಸಿ ಮಹದಾಯಿ ನದಿ ನ್ಯಾಯಾಧಿಕರಣವು ಕಳೆದ ಆಗಸ್ಟ್‌ನಲ್ಲಿ ಅಂತಿಮ ಐ ತೀರ್ಪು ನೀಡಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳು ಸುಪ್ರೀಂ ಕೋರ್ಟ್‌ ಕದ ಬಡಿದಿದ್ದರೆ, ನ್ಯಾಯಾಧಿಕರಣದಲ್ಲಿ ಸ್ಪಷ್ಟೀಕರಣ ಗೋವಾ ಅರ್ಜಿ ಸಲ್ಲಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು