
ನವದೆಹಲಿ(ಜ.23): ಬಹುಕೋಟಿ ರೂಪಾಯಿ ಕಲ್ಲಿದ್ದಲು ಹಗರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐನ ಮಾಜಿ ಮುಖ್ಯಸ್ಥ ರಂಜೀತ್ ಸಿನ್ಹಾ ವಿರುದ್ಧ ಮೇಲ್ನೋಟಕ್ಕೆ ಕಂಡುಬಂದಿರುವ ಆರೋಪಗಳ ಕುರಿತ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಕಲ್ಲಿದ್ದಲು ಹಗರಣದ ತನಿಖೆ ಮೇಲೆ ಪ್ರಭಾವ ಬೀರಲು ಸಿನ್ಹಾ ಯತ್ನಿಸಿದ್ದರು ಎಂಬ ನ್ಯಾಯಾಂಗ ಸಮಿತಿಯ ವರದಿ ಆಧರಿಸಿ ಎಂ.ಬಿ. ಲೋಕೂರ್ ನೇತೃತ್ವದ ವಿಶೇಷ ನ್ಯಾಯಪೀಠ ಈ ತೀರ್ಪನ್ನ ನೀಡಿದೆ.
ರಂಜೀತ್ ಸಿನ್ಹಾ ತಮ್ಮ ಸ್ಥಾನ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ತನಿಖೆ ನಡೆಯಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
ತನಿಖೆಗೆ ವಿಶೇಷ ತಂಡ ರಚಿಸುವಂತೆ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾರಿಗೆ ಆದೇಶಿಸಿರುವ ಕೋರ್ಟ್, ತನಿಖೆ ವೇಳೆ ಕೇಂದ್ರೀಯ ಜಾಗೃತ ದಳವನ್ನ ವಿಶ್ವಾಸಕ್ಕೆ ತೆಗದುಕೊಳ್ಳುವಂತೆ ಸೂಚಿಸಿದೆ. ತನಿಖಾ ತಂಡ ರಚನೆ ಮತ್ತು ತನಿಖೆ ಪೂರ್ಣಗೊಳ್ಳಲು ನಿಗದಿತ ಸಮಯ ಸೂಚಿಸುವಂತೆ ಕೋರ್ಟ್ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.