
ನವದೆಹಲಿ(ಅ.04): ಕರ್ನಾಟಕದ ವಾಸ್ತವ ಸ್ಥಿತಿ ಸುಪ್ರೀಂಕೋರ್ಟ್`ಗೆ ಅರ್ಥವಾದಂತೆ ಕಾಣುತ್ತಿದೆ. ಕರ್ನಾಟಕ ಪರ ವಕೀಲರ ಖಡಕ್ ವಾದ ಆಲಿಸಿದ ಸುಪ್ರೀಂಕೋರ್ಟ್ ಅಕ್ಟೋಬರ್ 7ರಿಂದ 18ರವರೆಗೆ 2 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್, ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.
ಇದಕ್ಕೂ ಮುನ್ನ ಅಕ್ಟೋಬರ್ 18ರವರೆಗೆ ಎಷ್ಟು ನೀರು ಬಿಡುತ್ತೀರ ತಿಳಿಸಿ ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಕರ್ನಾಟಕ 1500 ಕ್ಯೂಸೆಕ್ ನೀರು ಬಿಡುವುದಾಗಿ ಹೇಳಿತ್ತು. ಇದನ್ನ ಪರಿಗಣಿಸಿದ ಸುಪ್ರೀಂಕೋರ್ಟ್ ಇದರ ಜೊತೆಗೆ ಹೆಚ್ಚುವರಿ 500 ಕ್ಯೂಸೆಕ್ ಸೇರಿಸಿ 2000 ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ. ಸುಪ್ರೀಂಕೋರ್ಟ್`ನ ೀ ಆದೇಶದಿಂದ ಕರ್ನಾಟಕ ಸ್ವಲ್ಪಮಟ್ಟಿಗೆ ನಿಟ್ಟುಸಿರುಬಿಡುವಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.