ಸುಪ್ರೀಂ ಆದೇಶ: ಬಂಗಲೆ ತೆರವಿಗೆ ಯುಪಿಯ 4 ಮಾಜಿ ಸಿಎಂಗಳು ಸಜ್ಜು

Published : Jun 02, 2018, 09:24 AM IST
ಸುಪ್ರೀಂ ಆದೇಶ: ಬಂಗಲೆ ತೆರವಿಗೆ ಯುಪಿಯ  4 ಮಾಜಿ ಸಿಎಂಗಳು ಸಜ್ಜು

ಸಾರಾಂಶ

ವಾರಾಂತ್ಯದೊಳಗೆ ಸರ್ಕಾರ ನೀಡಿದ್ದ ಅಧಿಕೃತ ಬಂಗಲೆ ತೆರವುಗೊಳಿಸಬೇಕೆಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೇ ಉತ್ತರಪ್ರದೇಶದ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಬಂಗಲೆ ತೆರವು ಮಾಡಲು ಸಿದ್ಧರಾಗಿದ್ದಾರೆ. 

ಲಖನೌ (ಜೂ. 02): ವಾರಾಂತ್ಯದೊಳಗೆ ಸರ್ಕಾರ ನೀಡಿದ್ದ ಅಧಿಕೃತ ಬಂಗಲೆ ತೆರವುಗೊಳಿಸಬೇಕೆಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೇ ಉತ್ತರಪ್ರದೇಶದ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಬಂಗಲೆ ತೆರವು ಮಾಡಲು ಸಿದ್ಧರಾಗಿದ್ದಾರೆ. 

ಮೇ.7ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದ ಬಳಿಕ 6 ಮಾಜಿ ಮುಖ್ಯಮಂತ್ರಿಗಳಾದ, ನಾರಾಯಣ ದತ್‌ ತಿವಾರಿ, ಮುಲಾಯಾಂ ಸಿಂಗ್‌ ಯಾದವ್‌, ಕಲ್ಯಾಣ್‌ ಸಿಂಗ್‌, ಮಾಯಾವತಿ, ರಾಜ್‌ನಾಥ್‌ ಸಿಂಗ್‌ ಮತ್ತು ಅಖಿಲೇಶ್‌ ಯಾದವ್‌ ಅವರಿಗೆ ಬಂಗಲೆ ತೆರೆವುಗೊಳಿಸುವಂತೆ ನೋಟಿಸ್‌ ನೀಡಲಾಗಿತ್ತು. ಈ ಹಿನ್ನೆಲೆ ಮಾಜಿ ಸಿಎಂಗಳಾದ ತಿವಾರಿ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಹೊರತು ಪಡಿಸಿ ಉಳಿದ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಬಂಗಲೆ ತೆರವುಗೊಳಿಸಲು ನಿರ್ಧರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿಯಲ್ಲಿ ಮಿನಿ ಕುಂಭ.. ಶ್ರೀಲ ಪ್ರಭುಪಾದರಿಗೆ 'ವಿಶ್ವಗುರು' ಗೌರವ: ಪುತ್ತಿಗೆ ಮಠದಲ್ಲಿ ಐತಿಹಾಸಿಕ ಕ್ಷಣ
ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ