ಧೋನಿಗೆ ಬಿಗ್ ರಿಲೀಫ್..!

Published : Apr 20, 2017, 02:00 PM ISTUpdated : Apr 11, 2018, 12:36 PM IST
ಧೋನಿಗೆ ಬಿಗ್ ರಿಲೀಫ್..!

ಸಾರಾಂಶ

2013ರಲ್ಲಿ ಧೋನಿ ವಿಷ್ಣುವಿನ ಅವತಾರದಲ್ಲಿ ಶೂ, ಮೊಬೈಲ್ ಫೋನ್ ಸೇರಿದಂತೆ ವಿವಿಧ ಜಾಹಿರಾತು ಉತ್ಫನ್ನಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡ ಚಿತ್ರ ಮ್ಯಾಗ್'ಜಿನ್'ವೊಂದರ ಮುಖಪುಟದಲ್ಲಿ ಪ್ರಕಟಗೊಂಡಿತ್ತು.

ನವದೆಹಲಿ(ಏ.20): ಭಗವಂತನ ಅಪರವತಾರದಂತೆ ವಿಷ್ಣು ವೇಷಧಾರಿಯಾಗಿ ಕಂಗೊಳಿಸಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.

ಕ್ರಿಕೆಟಿಗ ಧೋನಿ ವಿಷ್ಣು ವೇಷಾಧಾರಿಯಾಗುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ. ಅಲ್ಲದೇ ಧೋನಿ ತಾವು ರಾಯಭಾರಿಯಾಗಿರುವ ಉತ್ಪನ್ನಗಳನ್ನು ಕೈಯಲ್ಲಿ ಹಿಡಿದಿದ್ದರು ಎಂದು ಆರೋಪಿಸಿ ಜಾರ್ಖಂಡ್ ಮೂಲದ ಆಟಗಾರನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.

ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಪ್ರಕರಣ ಯಾವುದೇ ದುರುದ್ದೇಶಪೂರ್ವಕವಾಗಿ ನಡೆದಿಲ್ಲ ಎಂದು ಪ್ರಕರಣವನ್ನು ಕೈಬಿಟ್ಟಿದೆ. ಇದರ ಜತೆಗೆ ನಿಯತಕಾಲಿಕೆ ಸಂಪಾದಕರ ಮೇಲಿದ್ದ ಪ್ರಕರಣವನ್ನು ನ್ಯಾಯಾಲಯ ವಜಾ ಮಾಡಿದೆ.

2013ರಲ್ಲಿ ಧೋನಿ ವಿಷ್ಣುವಿನ ಅವತಾರದಲ್ಲಿ ಶೂ, ಮೊಬೈಲ್ ಫೋನ್ ಸೇರಿದಂತೆ ವಿವಿಧ ಜಾಹಿರಾತು ಉತ್ಫನ್ನಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡ ಚಿತ್ರ ಮ್ಯಾಗ್'ಜಿನ್'ವೊಂದರ ಮುಖಪುಟದಲ್ಲಿ ಪ್ರಕಟಗೊಂಡಿತ್ತು. ಈ ಸಂಬಂಧ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎನ್ನುವ ಆರೋಪದಡಿ ಆಂಧ್ರಪ್ರದೇಶದ ಅನಂತಪುರ ಕೋರ್ಟ್ ಜಾಮೀನುರಹಿತ ವಾರೆಂಟ್ ಹೊರಡಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!