
ನವದೆಹಲಿ[ಡಿ.08]: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಬಂಡವಾಳ ಸಂಗ್ರಹವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಲ್ಲದೆ ಅರ್ಜಿದಾರನಿಗೆ 50 ಸಾವಿರ ರು. ದಂಡ ವಿಧಿಸಿದೆ.
ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ವಿಚಾರಣೆಗೆ ಅಂಗೀಕರಿಸಲು ಯಾವುದೇ ಕಾರಣಗಳು ಸಿಗುತ್ತಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ದ್ವಿಸದಸ್ಯ ಪೀಠ, ಅರ್ಜಿದಾರ ಎಂ.ಎಲ್. ಶರ್ಮಾಗೆ 50 ಸಾವಿರ ರು. ದಂಡ ವಿಧಿಸಿತು. ದಂಡ ಕಟ್ಟುವವರೆಗೂ ಯಾವುದೇ ಪಿಐಎಲ್ ಸಲ್ಲಿಸಲು ಅವಕಾಶ ನೀಡದಂತೆ ರಿಜಿಸ್ಟ್ರಿಗೆ ಸೂಚಿಸಿತು.
ಅರ್ಜಿಯನ್ನು ವಜಾಗೊಳಿಸಿದ ನಂತರವೂ ಶರ್ಮಾ ವಾದ ಮಂಡಿಸಿದ ಹಿನ್ನೆಲೆಯಲ್ಲಿ ಈ ದಂಡ ವಿಧಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ