ದೇಶದಲ್ಲಿ ಶಾಂತಿ ಇರೋದು ನಿಮಗೆ ಬೇಡ: ಅಯೋಧ್ಯೆಯಲ್ಲಿ ಪೂಜೆಗೆ ಸುಪ್ರೀಂ ನಿರಾಕರಣೆ!

Published : Apr 12, 2019, 03:17 PM IST
ದೇಶದಲ್ಲಿ ಶಾಂತಿ ಇರೋದು ನಿಮಗೆ ಬೇಡ: ಅಯೋಧ್ಯೆಯಲ್ಲಿ ಪೂಜೆಗೆ ಸುಪ್ರೀಂ ನಿರಾಕರಣೆ!

ಸಾರಾಂಶ

ಅಯೋಧ್ಯೆಯಲ್ಲಿ ಪೂಜೆಗೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ| 'ದೇಶದ ಜನತೆ ಶಾಂತಿಯಿಂದ ಬದುಕಲು ನೀವು ಬಿಡುವುದಿಲ್ಲ'| ಪೂಜೆಗೆ ಆಗ್ರಹಿಸಿದ್ದ ಅರ್ಜಿದಾರನಿಗೆ ಸುಪ್ರೀಂ ಕೋರ್ಟ್ ತಪರಾಕಿ| ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಪೂಜೆಗೆ ಸುಪ್ರೀಂ ನಿರಾಕರಣೆ| ಅಯೋಧ್ಯೆ ಜನರು ಶಾಂತಿಯಿಂದ ಇರುವುದು ನಿಮಗೆ ಇಷ್ಟವಿಲ್ಲ ಎಂದ ಸುಪ್ರೀಂ|

ನವದೆಹಲಿ(ಏ.12): ಮಹತ್ವದ ಬೆಳವಣಿಗೆಯೊಂದರಲ್ಲಿ ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಪೂಜೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಅಯೋಧ್ಯೆಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 'ಈ ದೇಶ ಶಾಂತಿಯಿಂದ ಇರುವುದನ್ನು ನೀವು ಬಯಸುವುದಿಲ್ಲ. ಯಾವಾಗಲೂ ಯಾರಾದರೊಬ್ಬರು ಈ ವಿಷಯದಲ್ಲಿ ಮೂಗು ತೂರಿಸುತ್ತಾರೆ..' ಎಂದು ಛೀಮಾರಿ ಹಾಕಿದೆ.

ಅಯೋಧ್ಯೆ ಜನರು ಶಾಂತಿಯಿಂದ ಇರುವುದು ನಿಮಗೆ ಇಷ್ಟವಿಲ್ಲವೇ ಎಂದು ಅರ್ಜಿದಾರರನ್ನು ಪ್ರಶ್ನಿಸಿದ ನ್ಯಾಯಾಲಯ, ಪೂಜೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ ಅರ್ಜಿದಾರರಿಗೆ 5 ಲಕ್ಷ ರೂ. ವೆಚ್ಚ ನೀಡಬೇಕೆಂಬ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಹಿಂತೆಗೆದುಕೊಳ್ಳಲು ಕೂಡ ಸುಪ್ರೀಂಕೋರ್ಟ್ ನಿರಾಕರಿಸಿದೆ.

ದೇಶದಲ್ಲಿ ಏ.11 ರಿಂದ ಮೇ.19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?