
ನವದೆಹಲಿ: ಆಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ವಿ.ಕೆ ಶಶಿಕಲಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ.
ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಮಾಡಿದ ಆರೋಪದಡಿ ಶಶಿಕಲಾ ಹಾಗೂ ಇನ್ನಿಬ್ಬರನ್ನು ಅಪರಾಧಿಗಳೆಂದು ಸುಪ್ರೀಂ ಕೋರ್ಟ್ ಕಳೆದ ಫೆ.14ರಂದು ತೀರ್ಪು ನೀಡಿತ್ತು. ಆ ಮೂಲಕ 19 ವರ್ಷಗಳ ವಾದ-ವಿವಾದಗಳ ಬಳಿಕ ಪ್ರಕರಣಕ್ಕೆ ಅಂತಿಮ ಫಲಿತಾಂಶ ಸಿಕ್ಕಿತ್ತು.
ಬೆಂಗಳೂರು ವಿಶೇಷ ಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್'ನ ದ್ವಿಸದಸ್ಯ ನ್ಯಾಯಪೀಠ ಶಶಿಕಲಾ ನಟರಾಜನ್'ಗೆ ನಾಲ್ಕು ವರ್ಷ ಜೈಲು ಹಾಗೂ 10 ಕೋಟಿ ದಂಡ ವಿಧಿಸಿ ತೀರ್ಪು ಪ್ರಕಟಿಸಿತ್ತು.
ಶಶಿಕಲಾ ಜತೆಗೆ ಇಳವರಸಿ ಹಾಗೂ ಮಾಜಿ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಅವರ ದತ್ತು ಪುತ್ರ ಸುಧಾಕರ್ ಅಪರಾಧಿಗಳೆಂದು ಸುಪ್ರೀಂ ಕೋರ್ಟ್ ಪ್ರಕಟಿಸಿತ್ತು.
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಆದಾಯ ಮೀರಿ ಆಸ್ತಿ ಪ್ರಕರಣದ ಮುಖ್ಯ ಆರೋಪಿಯಾಗಿದ್ದರು, ಆದರೆ ಅವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಪ್ರಕರಣದಿಂದ ಕೈಬಿಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.