ಮುಟ್ಟಿನ ಪ್ಯಾಡ್ ಬಗ್ಗೆ ಮಾತನಾಡಿ ಟ್ರೋಲ್ ಆದ ಕೇಂದ್ರ ಸಚಿವೆ

Published : Oct 23, 2018, 09:06 PM IST
ಮುಟ್ಟಿನ ಪ್ಯಾಡ್ ಬಗ್ಗೆ ಮಾತನಾಡಿ ಟ್ರೋಲ್ ಆದ ಕೇಂದ್ರ ಸಚಿವೆ

ಸಾರಾಂಶ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತೊಮ್ಮೆ ಟ್ರೋಲ್ ಗೆ ಒಳಗಾಗಿದ್ದಾರೆ. ಶಬರಿಮಲೆ ತೀರ್ಪಿನ ಬಗ್ಗೆ ಮಾತನಾಡುವಾಗ ನೀಡಿದ ಹೇಳಿಕೆ ಅವರನ್ನು ಟ್ರೋಲ್ ಗೆ ಗುರಿಮಾಡಿದೆ. ಹಾಗಾದರೆ ಇರಾನಿ ನೀಡಿದ ಅಂಥ ಹೇಳಿಕೆ ಏನು?

ಮುಂಬೈ[ಅ.23]  ಮಹಿಳೆಯರು ಮುಟ್ಟಿನ ಸಮಯದಲ್ಲಿ ಬಳಸಿದ ನ್ಯಾಪ್ಕಿನ್  ಅನ್ಗೆನು ಳೆಯರ ಮನೆಗೆ ಒಯ್ತಿರಾ?  ಹಾಗಾದ್ರೆ ದೇವರ ಮನೆಗೆ ಒಯ್ಯುವುದು ಸರಿನಾ? ಎಂದು ಪ್ರಶ್ನಿಸುವ ಮೂಲಕ  ಕೇಂದ್ರ ಸಚಿವೆ ಸ್ಮೃತಿ ಇರಾನಿ ಟ್ರೋಲ್ ಗೊಳಗಾಗಿದ್ದಾರೆ.

ಮುಂಬೈಯಲ್ಲಿ ನಡೆದ ಯಂಗ್ ಥಿಂಕರ್ಸ್ ಸಮ್ಮೇಳನದಲ್ಲಿ ಮಾತನಾಡಿದ ಸ್ಮೃತಿ ಇರಾನಿ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ ಸಚಿವೆಯಾಗಿ ಮಾತನಾಡುವುದು ಸರಿಯಲ್ಲ.  ಆದರೆ, ಪ್ರತಿಯೊಬ್ಬರಿಗೆ ಪ್ರಾಥಿಸುವ ಹಕ್ಕಿದೆ, ಆದರೆ ಅಪವಿತ್ರಗೊಳಿಸುವ ಹಕ್ಕಿಲ ಎಂದಿದ್ದಾರೆ.

ಮುಟ್ಟಿನ ರಕ್ತತುಂಬಿಕೊಂಡಿರುವ ನ್ಯಾಪ್ಕಿನನ್ನು ಯಾರಾದರೂ ಗೆಳೆಯರ ಮನೆಗೆ ಕೊಂಡೊಯ್ತಾರಾ? ಹಾಗಾದರೆ, ದೇವರ ಮನೆಗೆ ಕೊಂಡೊಯ್ಯುವುದು ಸರೀನಾ ಎಂದು ಪ್ರಶ್ನಿಸಿದ್ದಾರೆ.

ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶ ಮಾಡಲು ಮಹಿಳೆಯರು ಮುಂದಾಘಿದ್ದು, ಅದಕ್ಕೆ ವಿರೋಧವಾಗಿ ವ್ಯಕ್ತವಾದ ಪ್ರತಿಭಟನೆ, ಲಾಠಿ ಚಾರ್ಜ್  ಎಲ್ಲವೂ ಕಳೆದ ಒಂದು ವಾರದಿಂದ ಸುದ್ದಿಯಾಗುತ್ತಿದ್ದು ಇದೀಗ ಸ್ಮೃತಿ ಟ್ರೋಲಿಗರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ.
 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NIMHANS MindNote app: ಮಾನಸಿಕ ಆರೋಗ್ಯಕ್ಕೆ ನಿಮ್ಹಾನ್ಸ್ ಮೈಂಡ್‌ ನೋಟ್‌ ಆ್ಯಪ್: ಈಗ ಕನ್ನಡದಲ್ಲಿ!
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ