ರಾಜ್ಯ ಸಭಾ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ರಾಜ್ಯ ಸಭಾ ಚುನಾವಣೆಯಲ್ಲಿ ನೋಟಾ ಮತದಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.
ನವದೆಹಲಿ : ರಾಜ್ಯ ಸಭಾ ಚುನಾವಣೆಯಲ್ಲಿ ನೋಟಾ ಮತದಾನಕ್ಕೆ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠವು ಚುನಾವಣಾ ಆಯೋಗಕ್ಕೆ ಈ ಬಗ್ಗೆ ತಿಳಿಸಿದೆ.
ಗುಜರಾತ್ ಕಾಂಗ್ರೆಸ್ ಮುಖಂಡರಾದ ಮನುಭಾಯಿ ಪರ್ಮಾರ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ವಿಚಾರ ತಿಳಿಸಿದೆ.
ರಾಜ್ಯ ಸಭಾ ಚುನಾವಣೆಯಲ್ಲಿ ನೋಟಾಗೆ ಅವಕಾಶ ನೀಡುವುದು ಕುದುರೆ ವ್ಯಾಪಾರಕ್ಕೆ ಮತ್ತು ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತೆ ಎಂದು ಕಾಂಗ್ರೆಸ್ ಮುಖಂಡರು ಆರೋಪ ಮಾಡಿದ್ದರು.