ಜಲ್ಲಿಕಟ್ಟು ಪರ ಪ್ರತಿಭಟನೆ : ತಮಿಳುನಾಡಿಗೆ ಸುಪ್ರಿಂ ಛೀಮಾರಿ

Published : Jan 31, 2017, 12:30 PM ISTUpdated : Apr 11, 2018, 12:53 PM IST
ಜಲ್ಲಿಕಟ್ಟು ಪರ ಪ್ರತಿಭಟನೆ : ತಮಿಳುನಾಡಿಗೆ ಸುಪ್ರಿಂ ಛೀಮಾರಿ

ಸಾರಾಂಶ

ಯಾವುದೇ ಅಹಿತಕರ ಪ್ರತಿಭಟನೆ ನಡೆದಾಗ ಕಾನೂನಿನ ಮೂಲಕ ನಿಯಂತ್ರಿಸಬೇಕಾಗುತ್ತದೆ.ಈ ರೀತಿಯ ಘಟನೆಗಳು ಆಗಲೇಬಾರದು. ಪ್ರತಿಭಟನೆಗಳನ್ನು ನಿಯಂತ್ರಿಸುವುದು ನಿಮ್ಮ ಕರ್ತವ್ಯ ಕೂಡ' ಎಂದು ಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದೆ.

ನವದೆಹಲಿ(ಜ.31): ಚೆನ್ನೈನ ಮರೀನಾ ಬೀಚ್'ನಲ್ಲಿ ಜಲ್ಲಿಕಟ್ಟು ಪರವಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಛೀಮಾರಿ ಹಾಕಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ಸರ್ಕಾರದ ಆದ್ಯ ಕರ್ತವ್ಯ. 2 ವರ್ಷಗಳ ಹಿಂದೆಯೇ ಜಲ್ಲಿಕಟ್ಟಿಗೆ ತಡೆ ನೀಡಿದ್ದೇವೆ. ಈಗೇಕೆ ಪ್ರತಿಭಟನೆ ನಡೆಸುತ್ತಿದ್ದೀರಾ ? ಎಂದು ಕೋರ್ಟ್ ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದೆ. ಯಾವುದೇ ಅಹಿತಕರ ಪ್ರತಿಭಟನೆ ನಡೆದಾಗ ಕಾನೂನಿನ ಮೂಲಕ ನಿಯಂತ್ರಿಸಬೇಕಾಗುತ್ತದೆ.ಈ ರೀತಿಯ ಘಟನೆಗಳು ಆಗಲೇಬಾರದು. ಪ್ರತಿಭಟನೆಗಳನ್ನು ನಿಯಂತ್ರಿಸುವುದು ನಿಮ್ಮ ಕರ್ತವ್ಯ ಕೂಡ' ಎಂದು ಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದೆ.

 ಪ್ರಾಣಿಗಳ ಮೇಲೆ ಕ್ರೌರ್ಯ ನಡೆಯುತ್ತಿರುವ ಕಾರಣದಿಂದ ಸುಪ್ರೀಂ ಕೋರ್ಟ್ 2014ರಲ್ಲಿಯೇ ಜಲ್ಲಿಕಟ್ಟನ್ನು ನಿಷೇಧಿಸಿತ್ತು. ತದ ನಂತರ ಈ ವರ್ಷದ ಆರಂಭದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆಯಾದ ಕಾರಣದಿಂದ ಕೇಂದ್ರ ಸರ್ಕಾರ ನಿಷೇಧವನ್ನು ತಡೆಯಿಡಿದಿತ್ತು. ರಾಜ್ಯ ಸರ್ಕಾರ ಕೂಡ ವಿಶೇಷ ಅಧಿವೇಶನದ ಮೂಲಕ ಜಲ್ಲಿಕಟ್ಟು ವಿಧೇಯಕವನ್ನು ಅಂಗೀಕರಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!