ಬಾಬ್ರಿ ಮಸೀದಿ- ರಾಮ ಮಂದಿರ ವಿವಾದ ಮಾತುಕತೆ ಮೂಲಕ ಬಗೆಹರಿಸಲು ಸುಪ್ರೀಂ ಸಲಹೆ

Published : Mar 21, 2017, 09:09 AM ISTUpdated : Apr 11, 2018, 12:46 PM IST
ಬಾಬ್ರಿ ಮಸೀದಿ- ರಾಮ ಮಂದಿರ ವಿವಾದ ಮಾತುಕತೆ ಮೂಲಕ ಬಗೆಹರಿಸಲು ಸುಪ್ರೀಂ ಸಲಹೆ

ಸಾರಾಂಶ

ಬಾಬ್ರಿ ಮಸೀದಿ- ಅಯೋಧ್ಯೆ ರಾಮ ಮಂದಿರ ವಿವಾದ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ವಿಚಾರ. ಮೊದಲಿಗೆ ಎರಡು ಸಮುದಾಯಗಳು ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಯತ್ನಿಸಬೇಕು ಎಂದು ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಸೂಚಿಸಿದ್ದಾರೆ.

ನವದೆಹಲಿ (ಮಾ.21): ಅಯೋಧ್ಯೆ ಬಾಬ್ರಿ ಮಸೀದಿ- ರಾಮ ಜನ್ಮಭೂಮಿ ವಿವಾದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಸಲಹೆ ನೀಡಿದೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ವಿವಾದವನ್ನು ಕೋರ್ಟ್‌’ನ ಹೊರಗಡೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಸರ್ವೋಚ್ಛ ನ್ಯಾಯಾಲಯ ಸಲಹೆ ನೀಡಿದೆ.

ಎರಡು ಕಡೆಯವರು ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಲು ಸಾಧ್ಯವಾಗದಿದ್ದರೆ ಮಾತ್ರ ಮಧ್ಯೆ ಪ್ರವೇಶಿಸುವುದಾಗಿ ಸುಪ್ರೀಂ ಕೋರ್ಟ್​ ತಿಳಿಸಿದೆ.

ರಾಮಮಂದಿರ ವಿವಾದ ಕಳೆದ ಆರು ವರ್ಷಗಳಿಂದ ಬಾಕಿವುಳಿದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್​ ಈ ಮಹತ್ವದ ಸಲಹೆ ನೀಡಿದೆ.

ಬಾಬ್ರಿ ಮಸೀದಿ- ಅಯೋಧ್ಯೆ ರಾಮ ಮಂದಿರ ವಿವಾದ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ವಿಚಾರ. ಮೊದಲಿಗೆ ಎರಡು ಸಮುದಾಯಗಳು ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಯತ್ನಿಸಬೇಕು ಎಂದು ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಸೂಚಿಸಿದ್ದಾರೆ.

ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಈ ಸಲಹೆ ನೀಡಿದೆ.

ಆದರೆ ಎರಡು ಸಮುದಾಯಗಳು ಕುಳಿತು ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥ ಕಷ್ಟ ಸಾಧ್ಯ. ಆದ್ದರಿಂದ ನ್ಯಾಯಾಂಗದ ಮೂಲಕ ಕೇಸ್ ಇತ್ಯರ್ಥವಾಗಬೇಕು ಎಂದು ಸ್ವಾಮಿ ಕೋರ್ಟ್‌ಗೆ ತಿಳಿಸಿದ್ದಾರೆ. ಹೀಗಾಗಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಮಾ.31ಕ್ಕೆ ಮುಂದೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು: ಸಚಿವ ಆರ್‌.ಬಿ.ತಿಮ್ಮಾಪೂರ
ಸಿಎಂ ದೆಹಲಿ ಪ್ರಯಾಣದ ನಂತರ ಸಂಪುಟ ಪುನಾರಚನೆ: ಮಾಜಿ ಸಚಿವ ಕೆ.ಎನ್.ರಾಜಣ್ಣ