
ನವದೆಹಲಿ(ಏ.24): ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಪಷ್ಟನೆಗೆ ಹಾಜರಾಗುವಂತೆ ಸಿಬಿಐ, ಗುಪ್ತಚರ ಮತ್ತು ದೆಹಲಿ ಪೊಲೀಸ್ ಕಮಿನಿಷರ್ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಗಗೋಯ್ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳದ ಆರೋಪ ಮಾಡಲಾಗಿದ್ದು, ಇದರಲ್ಲಿ ಪಿತೂರಿ ನಡೆದಿದೆ ಎಂದು ಆರೋಪಿಸಿ ವಕೀಲ ಉತ್ಸವ್ ಭೈನ್ಸ್ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದ್ದರು.
ಗಗೋಯ್ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಸುಪ್ರೀಂ ಕೋರ್ಟ್ನ ಇತರೆ ನ್ಯಾಯಮೂರ್ತಿಗಳನ್ನು ಬೆದರಿಸಲು ಕೆಲವರು ಪಿತೂರಿ ನಡೆಸಿದ್ದು, ನ್ಯಾಯಾಂಗ ವ್ಯವಸ್ಥೆ ದೃಷ್ಟಿಯಿಂದ ಇದು ತುಂಬಾ ಗಂಭೀರವಾದ ಘಟನೆ ಎಂದು ಉತ್ಸವ್ ಭೈನ್ಸ್ ತಮ್ಮ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಬಿಐ, ಗುಪ್ತಚರ ಮತ್ತು ದೆಹಲಿ ಪೊಲೀಸ್ ಕಮಿಷನರ್ಗೆ ಸುಪ್ರೀಂ ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.