ಸಲಿಂಗಕಾಮ: ಸುಪ್ರೀಂನಲ್ಲಿ ಇಂದಿನಿಂದ ಅರ್ಜಿ ವಿಚಾರಣೆ

Published : Jul 10, 2018, 11:05 AM IST
ಸಲಿಂಗಕಾಮ: ಸುಪ್ರೀಂನಲ್ಲಿ  ಇಂದಿನಿಂದ ಅರ್ಜಿ ವಿಚಾರಣೆ

ಸಾರಾಂಶ

ಸಲಿಂಗಕಾಮವನ್ನು ಅಪರಾಧ ಎಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಮುಂದೂಡಬೇಕು ಎಂಬ ಕೇಂದ್ರ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಅಲ್ಲದೆ, ಈ ಕುರಿತಾದ ನಿರ್ಣಾಯಕ ವಿಚಾರಣೆಯನ್ನು ಇಂದಿನಿಂದ  ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಹೇಳಿದೆ. 

ನವದೆಹಲಿ (ಜು. 10): ಸಲಿಂಗಕಾಮವನ್ನು ಅಪರಾಧ ಎಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಮುಂದೂಡಬೇಕು ಎಂಬ ಕೇಂದ್ರ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

ಅಲ್ಲದೆ, ಈ ಕುರಿತಾದ ನಿರ್ಣಾಯಕ ವಿಚಾರಣೆಯನ್ನು ಇಂದಿನಿಂದ  ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಹೇಳಿದೆ. ಇಬ್ಬರು ಸಲಿಂಗಿಗಳ ಒಪ್ಪಿತ ಲೈಂಗಿಕ ಕ್ರಿಯೆಯನ್ನು ಅಪರಾಧ ಪ್ರಕರಣವೆಂದು ಪರಿಗಣಿಸಲಾಗುವ ಸಂವಿಧಾನದ 377ನೇ ವಿಧಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ನೂತನವಾಗಿ ರಚಿಸಲಾದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಒಪ್ಪಿಗೆ ನೀಡಿದೆ.

ಈ ಬಗ್ಗೆ ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ, ಸಲಿಂಗಕಾಮದ ಕುರಿತು ತನ್ನ ಅಭಿಪ್ರಾಯ ತಿಳಿಸಲು ನಾಲ್ಕು ವಾರಗಳ ಕಾಲಾವಧಿ ನೀಡಬೇಕು. ಅಲ್ಲಿಯವರೆಗೂ ಈ ವಿಚಾರಣೆ ಮುಂದೂಡಬೇಕು ಎಂಬ ಕೇಂದ್ರ ಸರ್ಕಾರದ ವಾದವನ್ನು ತಿರಸ್ಕರಿಸಿತು. 2009ರಲ್ಲಿ ಒಂದೇ ಲಿಂಗದ ನಡುವಿನ ಲೈಂಗಿಕ ಕ್ರಿಯೆಯನ್ನು ಅಪರಾಧವಲ್ಲ ಎಂಬುದಾಗಿ ದೆಹಲಿ ಹೈಕೋರ್ಟ್‌ ತೀರ್ಪು ನೀಡಿತ್ತು. ಆದರೆ, 2013ರಲ್ಲಿ ದೆಹಲಿ ಹೈಕೋರ್ಟ್‌ ತೀರ್ಪನ್ನು ವಜಾಗೊಳಿಸಿದ ಸುಪ್ರೀಂ, ಸಲಿಂಗಕಾಮ ಅಪರಾಧ ಎಂಬ ಹಳೆಯ ಕಾನೂನನ್ನು ಜಾರಿ ಮಾಡಿತ್ತು. ಇದೀಗ ಸುಪ್ರೀಂ ತೀರ್ಪನ್ನು ರದ್ದುಗೊಳಿಸಿ, ದೆಹಲಿ ಕೋರ್ಟ್‌ ತೀರ್ಪನ್ನು ಪುನಸ್ಥಾಪಿಸಬೇಕು ಎಂಬುದಾಗಿ ಹಲವರು ಅರ್ಜಿ ಸಲ್ಲಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ ಮುಸ್ಲಿಂ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!