
ನವದೆಹಲಿ (ಮಾ.23): ಕಾಗದ-ಪತ್ರಗಳಿಲ್ಲದೇ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗುತ್ತದೆ. ಆದರೆ ಇತ್ತೀಚಿಗೆ ಕಾಗದದ ಬಳಕೆ ಹೆಚ್ಚಾಗುತ್ತಿದ್ದು ಅದನ್ನು ತಗ್ಗಿಸಿ ಕಂಪ್ಯೂಟರೀಕರಣಗೊಳಿಸಲು ನ್ಯಾಯಾಲಯ ಚಿಂತನೆ ನಡೆಸಿದೆ.
ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯಗಳ ಮೂಲಕ ದಾಖಲೆಗಳನ್ನು ವಿದ್ಯನ್ಮಾನ ಮೂಲಕ ತರಿಸಿಕೊಳ್ಳುತ್ತೇವೆ. ಅದರ ಸಹಾಯದಿಂದ ವಿಚಾರಣೆ ನಡೆಸುತ್ತೇವೆ. ಇನ್ನು ಆರೇಳು ತಿಂಗಳಲ್ಲಿ ಅರ್ಜಿಗಳು ಮತ್ತು ದಾಖಲೆಗಳ ಬೃಹತ್ ಕಾಗದ ಪತ್ರ ಕಡತಗಳ ಅಗತ್ಯವಿರುವುದಿಲ್ಲ ಎಂದು ಮುಖ್ಯ ನ್ಯಾ. ಜೆ.ಎಸ್. ಖೇಹರ್ ಹೇಳಿದ್ದಾರೆ.
ಕೆಳಹಂತದ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಮಾತ್ರ ಫೈಲ್ ಮಾಡಿ ಎಂದು ವಕೀಲರಿಗೆ ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.