ದೆಹಲಿ ವಾಯುಮಾಲಿನ್ಯ; ಗುರುವಾರ ಪಿಐಎಲ್ ವಿಚಾರಣೆ ನಡೆಸಲಿರುವ ಸುಪ್ರೀಂ

Published : Nov 07, 2016, 10:38 AM ISTUpdated : Apr 11, 2018, 12:34 PM IST
ದೆಹಲಿ ವಾಯುಮಾಲಿನ್ಯ; ಗುರುವಾರ ಪಿಐಎಲ್ ವಿಚಾರಣೆ ನಡೆಸಲಿರುವ ಸುಪ್ರೀಂ

ಸಾರಾಂಶ

ದೆಹಲಿಯಲ್ಲಿ ವಾಯುಮಾಲಿನ್ಯ ನಿಗದಿತ ಮಟ್ಟ ಮೀರಿದ್ದು ಇದಕ್ಕೆ ಸಂಬಂಧಿಸಿದ ಪಿಐಎಲ್ ವಿಚಾರಣೆಯನ್ನು  ಸುಪ್ರೀಂಕೋರ್ಟ್ ನಾಳೆ ನಡೆಸಲಿದೆ.

ದೆಹಲಿ (ನ.07): ದೆಹಲಿಯಲ್ಲಿ ವಾಯುಮಾಲಿನ್ಯ ನಿಗದಿತ ಮಟ್ಟ ಮೀರಿದ್ದು ಇದಕ್ಕೆ ಸಂಬಂಧಿಸಿದ ಪಿಐಎಲ್ ವಿಚಾರಣೆಯನ್ನು  ಸುಪ್ರೀಂಕೋರ್ಟ್ ನಾಳೆ ನಡೆಸಲಿದೆ.

ಕೇಂದ್ರದ ಪ್ರತಿನಿಧಿಗಳಾಗಿ ವಕೀಲರು ಹಾಗೂ ದೆಹಲಿ ಸರ್ಕಾರದ ಪರ ಅಧಿಕಾರಿಗಳು ವಿಚಾರಣೆ ವೇಳೆ ಉಪಸ್ಥಿತರಿಬೇಕೆಂದು ನ್ಯಾಯಾಲಯ ಇಚ್ಚಿಸಿದೆ.

ರಾಜ್ಯ ರಾಜಧಾನಿಯಲ್ಲಿ ಕಳೆದ ಕೆಲ ದಿನಗಳಿಂದ ವಾಯು ಮಾಲಿನ್ಯ ಮಿತಿಮೀರಿದೆ. ಕಳೆದ 17 ವರ್ಷಗಳಲ್ಲಿಯೇ ಅತಿ ಹೆಚ್ಚು ವಾಯುಮಾಲಿನ್ಯದಿಂದ ದೆಹಲಿ ಕಂಗಾಲಾಗಿದೆ.ಉಸಿರಾಟ ತೊಂದರೆ, ಅಸ್ತಮಾ, ಕಣ್ಣುರಿ ಅಲರ್ಜಿಯಿಂದ ಜನ ನಿಜಕ್ಕೂ ಹೈರಾಣಾಗಿ ಹೋಗಿದ್ದಾರೆ. ವಯೋವೃದ್ಧರು ಹಾಗೂ ಮಕ್ಕಳ ಸ್ಥಿತಿ ಅಸಹನೀಯ. ಮನೆ ಬಿಟ್ಟು ಕದಲುವುದೇ ಬೇಡ ಅನ್ನುವ ಸ್ಥಿತಿ ಇದೆ.

ಬುಧವಾರದೊಳಗೆ ಆಕಾಶ ತಿಳಿಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪರಿಸ್ಥಿತಿಯ ಗಂಭೀರತೆ ಅರಿತ ಸುಪ್ರೀಂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಾಳೆ ನಡೆಸಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!