
ನವದೆಹಲಿ: ಹಿಂದೂಗಳು ಅಲ್ಪಸಂಖ್ಯಾತರಾಗಿರುವ 8 ರಾಜ್ಯಗಳಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂಬ ಮನವಿಯನ್ನು ವಿಚಾರಣೆಗೆ ಅಂಗೀಕರಿಸಲು ನಿರಾಕರಿಸಿದ ಸುಪ್ರೀಂಕೋರ್ಟ್, ಈ ಕುರಿತು ರಾಷ್ಟ್ರೀಯ ಅಲ್ಪ ಸಂಖ್ಯಾತ ಆಯೋಗಕ್ಕೆ ಮನವಿ ಸಲ್ಲಿಸಲು ಸೂಚಿಸಿದೆ.
ಹೀಗಾಗಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನದ ವಿಷಯ ಇದೀಗ ಅಲ್ಪಸಂಖ್ಯಾತ ಆಯೋಗದ ಹೆಗಲಿಗೆ ವರ್ಗವಾಗಿದೆ.
ಬಿಜೆಪಿ ಮುಖಂಡ ಅಶ್ವನಿ ಕುಮಾರ್ ಉಪಾಧ್ಯಾಯ ಎಂಬುವವರು ಸುಪ್ರೀಂ ಕೋರ್ಟ್ಗೆ ಈ ಮನವಿ ಸಲ್ಲಿಸಿದ್ದರು.
ಹಿಂದುಗಳು ಈ ರಾಜ್ಯದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದರೂ ಅವರಿಗೆ ದೊರಕಬೇಕಾದ ಅಲ್ಪಸಂಖ್ಯಾತ ಸ್ಥಾನಮಾನದ ಪ್ರಯೋಜನಗಳು ದೊರಕುತ್ತಿಲ್ಲ. ಅಲ್ಪಸಂಖ್ಯಾತ ಸ್ಥಾನಮಾನ ಹೊಂದಿರುವ ಬಹುಸಂಖ್ಯಾತರೇ ಎಲ್ಲ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.