
ಬೆಂಗಳೂರು: ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕೇರಳದ ಕೊಲೆ ಮತ್ತು ಇತರ ಅಪರಾಧಗಳ ಸಂಸ್ಕೃತಿಯನ್ನು ಕರ್ನಾಟಕಕ್ಕೆ ರಫ್ತು ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಹಾಗೂ ಮಾಜಿ ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಗಂಭೀರವಾಗಿ ಆಪಾದಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಸಂಘಟಿಸಲು ತಮ್ಮ ಪಕ್ಷದ ಕಾರ್ಯಕರ್ತರಿಗೆ ವೇಣುಗೋಪಾಲ್ ಅವರು ಕೇರಳ ಮಾದರಿ ಸಲಹೆ ನೀಡಿದ್ದಾರೆ. ಕೇರಳದಲ್ಲಿ ಹತ್ಯೆ, ಹಿಂಸೆ, ಅತ್ಯಾಚಾರಗಳು ಹೇಗೆಲ್ಲಾ ನಡೆಯುತ್ತಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದ್ದರಿಂದ ವೇಣು ತಮ್ಮ ರಾಜ್ಯದ ಕೊಲೆ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಆಮದು ಮಾಡಿಕೊಳ್ಳುವಂತೆ ಮಾಡಬಾರದು ಎಂಬ ಮನವಿ ಮಾಡುತ್ತೇನೆ ಎಂದು ಹೇಳಿದರು.
ವೇಣು ರಾಜ್ಯದಲ್ಲಿ ಚುನಾವಣೆ ರಣೋತ್ಸಾಹ ತೋರಿಸುತ್ತಿದ್ದಾರೆ. ಆದರೆ ಆ ಉತ್ಸಾಹ ಗಡಿ ದಾಟುವಂತಾಗಿದೆ. ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಪದಾಧಿಕಾರಗಳ ಸಭೆಯಲ್ಲಿ ಎಬಿವಿಪಿ ಮತ್ತು ಆರ್ಎಸ್ಎಸ್ ಪ್ರೇರಿತ ಕಾಲೇಜುಗಳ ಪಟ್ಟಿಕೇಳಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆ ಕಾಲೇಜುಗಳ ಪ್ರಾಂಶುಪಾಲರ ಮಾಹಿತಿಯನ್ನೂ ಸಂಗ್ರಹಿಸಲು ಸೂಚಿಸಿದ್ದಾರೆ. ಇದಕ್ಕೆ ಕೇರಳವನ್ನು ಮಾದರಿಯನ್ನಾಗಿ ಮಾಡುವಂತೆಯೂ ಹೇಳಿದ್ದಾರೆ. ಈ ಕ್ರಮ ಸರಿಯಲ್ಲ. ಇದನ್ನು ನಾನು ಸಹಿಸುವುದಿಲ್ಲ ಎಂದು ಅವರು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.