
ಬೆಂಗಳೂರು(ಮೇ.29): ಯಾರ ಆಹಾರವನ್ನು ಕಸಿದುಕೊಳ್ಳುವ ಅಥವಾ ಯಾರ ಮನಸ್ಸಿಗೆ ಘಾಸಿಗೊಳಿಸುವ ಪ್ರಯತ್ನ ಕೇಂದ್ರ ಸರ್ಕಾರ ಮಾಡಿಲ್ಲ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಗೋಹತ್ಯೆ ನಿಷೇದ ಕಾಯ್ದೆಯನ್ನ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಬಿಜೆಪಿ ಹೊರಡಿಸಿದ ಸುತ್ತೋಲೆ ಅಲ್ಲ. ಸಂವಿಧಾನದ 48 ರ ವಿಧಿಯ ಪ್ರಕಾರ ಸುತ್ತೋಲೆ ಹೊರಡಿಸಲಾಗಿದೆ. ಇದು ನಿಮಗೆ ಇಷ್ಟ ಇಲ್ಲ ಅಂದ್ರೆ ಸಂವಿಧಾನ ಪೀಠಕ್ಕೆ ಹೋಗಿ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಹೊಸ ಕಾನೂನಿನಲ್ಲಿ ಜಾನವಾರು ಅಂತ ಇದೆ. ಜಾನುವಾರು ಎಂದರೆ ಹಸು, ಕೋಣ, ಎಮ್ಮೆ ಎಲ್ಲವೂ ಬರತ್ತೆ. ಇತ್ತಿಚೆಗೆ ವಿಶೇಷ ತಳಿಗಳ ಸಂಖ್ಯೆ ಕುಸಿಯುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಪರಿಸರ ಇಲಾಖೆ ಈ ಸುತ್ತೋಲೆ ಹೊರಡಿಸಿದೆ. ಇದೇ ವೇಳೆ ಬೀಫ್ ಪೆಸ್ಟ್ ನಡೆಸೋದಕ್ಕೆ ಅವಕಾಶ ನೀಡಬಾರದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.