ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ರಾಜು ಮತ್ತು ಮತ್ತೋರ್ವ ಸಂಸದ ವೈ.ಎಸ್. ಚೌಧರಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ನವದೆಹಲಿ: ಟಿಡಿಪಿ ಸಂಸದ ಅಶೋಕ್ ಗಜಪತಿ ರಾಜು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಅವರಿಗೆ ನಾಗರಿಕ ವಿಮಾನಯಾನ ಸಚಿವಾಲಯದ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ. ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ರಾಜು ಮತ್ತು ಮತ್ತೋರ್ವ ಸಂಸದ ವೈ.ಎಸ್. ಚೌಧರಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.