
ನವದೆಹಲಿ(ಅ.05): ಗಡಿ ನಿಯಂತ್ರಣ ರೇಖೆ ದಾಟಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಕುರಿತ ವಿಡಿಯೋ ತುಣುಕುಗಳನ್ನು ಭಾರತೀಯ ಸೇನೆ ಸರ್ಕಾರಕ್ಕೆ ಒಪ್ಪಿಸಿದೆ. ಈ ಹಿಂದೆ ಗೃಹ ಸಚಿವ ರಾಜ್’ನಾಥ್ ಸಿಂಗ್ ವಿಡಿಯೋ ತುಣುಕು ಬಿಡುಗಡೆ ಮಾಡುವ ಕುರಿತಂತೆ ಕಾದು ನೋಡಿ ಎಂದು ಹೇಳಿದ ಮಾತಿಗೆ ಪುಷ್ಟಿ ಬಂದಂತಾಗಿದೆ.
ಸೆಪ್ಟೆಂಬರ್ 28ರ ರಾತ್ರಿ ಭಾರತೀಯ ಸೇನೆ ಸರ್ಜಿಕಲ್ ದಾಳಿ ನಡೆಸಿತ್ತು. ದಾಳಿಯ ವಿಡಿಯೋ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಕುರಿತಂತೆ ಗೃಹ ಸಚಿವಾಲಯದ ರಾಜ್ಯಖಾತೆ ಸಚಿವ ಹಂಸರಾಜ್ ಆಹಿರ್ ಸ್ಪಷ್ಟಪಡಿಸಿದ್ದಾರೆ.
ಮೊದಲೆಲ್ಲಾ ಬರವಣಿಗೆಯಲ್ಲೇ ದಾಖಲೆಯನ್ನು ಒದಗಿಸಲಾಗುತ್ತಿತ್ತು. ಈಗ ಕಾಲ ಬದಲಾಗಿದೆ. ಈಗ ವಿಡಿಯೋ ಕ್ಲಿಪ್ಸ್’ಗಳನ್ನು ದಾಖಲೆ ರೂಪದಲ್ಲಿ ವರದಿ ನೀಡಲಾಗುತ್ತಿದೆ.
ಪ್ರಧಾನ ಮಂತ್ರಿ ಕಾರ್ಯಾಲಯದ ಅಧಿಕಾರಿಗಳು ದೃಶ್ಯಾವಳಿಗಳನ್ನು ಬಿಡುಗಡೆಗೊಳಿಸಲು ಅನುಮತಿ ನೀಡಿದರೆ, ಪಾಕಿಸ್ಥಾನದ ಆರೋಪಗಳಿಗೆ ತಕ್ಕ ಉತ್ತರ ಸಿಗಲಿದೆ ಎಂದು ಆಹಿರ್ ಹೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಜಿಕಲ್ ದಾಳಿ ನಡೆದಿಲ್ಲ ಎಂದು ಪಾಕಿಸ್ತಾನ ಹೇಳಿಕೆ ನೀಡಿತ್ತು.
ಸರ್ಜಿಕಲ್ ದಾಳಿಯ ದೃಶ್ಯಾವಳಿಗಳನ್ನು ಬಿಡುಗಡೆಗೊಳಿಸಿದರೆ ರಾಜಕೀಯ ದೊಂಬರಾಟಕ್ಕೆ ಬ್ರೇಕ್ ಬೀಳಲಿದೆ ಎಂದಿದ್ದಾರೆ. ಆದರೆ ಹಿರಿಯ ರಕ್ಷಣಾ ತಜ್ಞರೂ ಹಾಗೂ ಸೇನೆ ವಿಡಿಯೋ ಬಿಡುಗಡೆ ಮಾಡದಂತೆ ಸರ್ಕಾರಕ್ಕೆ ತಾಕೀತು ಮಾಡಿದೆ ಎಂದು ಉನ್ನತ ತಿಳಿಸಿವೆ.
ಈ ಹಿಂದೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳು ಸರ್ಜಿಕಲ್ ದಾಳಿ ನಡೆದಿರುವ ಬಗ್ಗೆ ಸಾಕ್ಷಿ ಒದಗಿಸಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.