
ನವದೆಹಲಿ (ಅ.02): ಗಡಿ ನಿಯಂತ್ರಣ ರೇಖೆ ಬಳಿ ಭಾರತ ನಡೆಸಿರುವ ಸರ್ಜಿಕಲ್ ದಾಳಿಯು ವಿಶ್ವಸಂಸ್ಥೆಯ 'ಭಾರತ-ಪಾಕಿಸ್ತಾನ ಸೇನಾ ವೀಕ್ಷಕ ಸಮಿತಿ'ಯ ನೇರ ಗಮನಕ್ಕೆ ಬಂದಿಲ್ಲವೆಂದು ವಿಶ್ವಸಂಸ್ಥೆಯು ಹೇಳಿದೆ. ಆದರೆ ಭಾರತವು ವಿಶ್ವಸಂಸ್ಥೆಯ ಹೇಳಿಕೆಯನ್ನು ತಳ್ಳಿಹಾಕಿದೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ವಿಶ್ವಸಂಸ್ಥೆ ಮಹಾ-ಕಾರ್ಯದರ್ಶಿಯವರ ವಕ್ತಾರ ಸ್ಟಿಫನ್ ಡುಜಾರ್ರಿಕ್, ಗಡಿ ನಿಯಂತ್ರಣ ರೇಖೆ ಬಳಿ ದಾಳಿ ನಡೆದಿರುವುದು ವೀಕ್ಷಕ ಸಮಿತಿಯ ಗಮನಕ್ಕೆ ಬಂದಿಲ್ಲವೆಂದು ಹೇಳಿದ್ದಾರೆ.
ಅವರ ಗಮನಕ್ಕೆ ಬಂದಿರಲಿ ಅಥವಾ ಇಲ್ಲದಿರಲಿ, ದಾಳಿ ನಡೆದಿರುವುದು ವಾಸ್ತವ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿರುವ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.