
ನವದೆಹಲಿ (ಅ.09): ಸದಾ ಕೆಲಸದ ಒತ್ತಡದಲ್ಲಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಗಂಡನ ಆಯುಷ್ಯ-ಆರೋಗ್ಯಕ್ಕಾಗಿ ಕರ್ವಾಚೌತ್ ಆಚರಣೆ ಮಾಡಿದ್ದಾರೆ.
ದೇಶಾದ್ಯಂತ ನಿನ್ನೆ ಲಕ್ಷಾಂತರ ಮಂದಿ ಪತ್ನಿಯರು ತಮ್ಮ ಪತಿಯ ಒಳಿತಿಗಾಗಿ ಕಾರ್ತಿಕ ಚತುರ್ಥಿ ಉಪವಾಸ ಆಚರಿಸಿ, ತಮ್ಮ ಪತಿಯ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಇಡೀ ದಿನ ಉಪವಾಸ ವ್ರತ ಮಾಡಿದ್ದಾರೆ. ಕೆಲ ಸುಮಂಗಲಿಯರ ಜೊತೆ ಸೇರಿ ನವದೆಹಲಿಯಲ್ಲಿ ಸುಷ್ಮಾ ಸ್ವರಾಜ್ ಕರ್ವಾಚೌತ್ ಆಚರಣೆ ಮಾಡಿದ್ದು, ಸಾಂಪ್ರದಾಯಿಕ ಉಡುಗೆ ತೊಟ್ಟು ಎಲ್ಲರ ಗಮನ ಸೆಳೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.