
ನವದೆಹಲಿ (ಆ.07) : ರಾಜ್ಯ ಜನತೆ ಬಹಳ ಕುತೂಹಲದಿಂದ ಎದುರು ನೋಡುತ್ತಿರುವ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಲಾಗಿದೆ.
ಸಚಿವ ಸಂಪುಟ ಅಂತಿಮಗೊಳಿಸುವ ಬಗ್ಗೆ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆ ಇಂದು (ಬುಧವಾರ) ಚರ್ಚೆ ನಡೆಸುವವರಿದ್ದರು. ಆದರೆ ಅಮಿತ್ ಶಾರನ್ನು ಭೇಟಿಯಾಗದೆ ಯಡಿಯೂರಪ್ಪ ದೆಹಲಿ ಪ್ರವಾಸ ಮೊಟಕುಗೊಳಿಸಿದ್ದಾರೆ.
ಸುಷ್ಮಾ ಸ್ವರಾಜ್ ನಿಧನದ ಹಿನ್ನೆಲೆಯಲ್ಲಿ ಇಂದು ಭೇಟಿ ಸಾಧ್ಯವಿಲ್ಲವೆಂದು ಅಮಿತ್ ಶಾ ಹೇಳಿರುವ ಕಾರಣ ಯಡಿಯೂರಪ್ಪ ರಾಜ್ಯಕ್ಕೆ ಹಿಂದಿರುಗಲಿದ್ದಾರೆ.
ಇದನ್ನೂ ಓದಿ | ಮುಂದುವರೆದ ವರ್ಗಾವಣೆ: ಸಿಎಂ ತವರಿಗೆ ಹೊಸ ಜಿಲ್ಲಾಧಿಕಾರಿ!
ಗುರುವಾರ (ಆ.08) ಅಥವಾ ಶುಕ್ರವಾರ (ಆ.09) ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ನಿರೀಕ್ಷಿಸಸಲಾಗಿತ್ತು. ಅಮಿತ್ ಶಾ- ಯಡಿಯೂರಪ್ಪ ಮುಂದಿನ ಭೇಟಿ ಆ.12ಕ್ಕೆ ನಿಗದಿಯಾಗಿದೆ.
ಆ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿವಸಕ್ಕೆ ಮುನ್ನವೇ, ಅಂದರೆ ಆ.13ಕ್ಕೆ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರುವ ಸಾಧ್ಯತೆಗಳು ಹೆಚ್ಚಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.