ಒಐಸಿ ಸಭೆಯಲ್ಲಿ ಸುಷ್ಮಾ ಸ್ವರಾಜ್: ಭಯೋತ್ಪಾದನೆ ವಿರುದ್ಧ ಗುಡುಗು!

Published : Mar 01, 2019, 04:30 PM IST
ಒಐಸಿ ಸಭೆಯಲ್ಲಿ ಸುಷ್ಮಾ ಸ್ವರಾಜ್: ಭಯೋತ್ಪಾದನೆ ವಿರುದ್ಧ ಗುಡುಗು!

ಸಾರಾಂಶ

ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ಸಮಾವೇಶದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್| ಒಐಸಿ ಸಮಾವೇಶಕ್ಕೆ ಭಾರತದ ಸುಷ್ಮಾ ಸ್ವರಾಜ್ ಗೌರವ ಅತಿಥಿ| ಭಯೋತ್ಪಾದನೆ ವಿರುದ್ಧ ಜಗತ್ತಿನ ದೇಶಗಳೆಲ್ಲಾ ಒಟ್ಟಾಗಿ ಹೋರಾಡಬೇಕಿದೆ ಎಂದ ಸುಷ್ಮಾ| ‘ಭಯೋತ್ಪಾದನೆಗೆ ಹಣ,ಆಶ್ರಯ ನೀಡುವ ದೇಶಗಳ ಬಣ್ಣ ಬಯಲು ಮಾಡಬೇಕಿದೆ’| ಸುಷ್ಮಾ ಆಹ್ವಾನ ಖಂಡಿಸಿ ಸಭೆ ಬಹಿಷ್ಕರಿಸಿದ ಪಾಕಿಸ್ತಾನ|

ಅಬುದಾಬಿ(ಮಾ.01): ಭಯೋತ್ಪಾದನೆಯಿಂದ ಹಿಂಸಾಚಾರ ಹೆಚ್ಚಾಗಿದ್ದು, ಭಯೋತ್ಪಾದನೆ ವಿರುದ್ಧ ಜಗತ್ತಿನ ದೇಶಗಳೆಲ್ಲಾ ಒಟ್ಟಾಗಿ ಹೋರಾಡಬೇಕಿದೆ ಎಂದು ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ಸಮಾವೇಶದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಒಐಸಿ ಸಮಾವೇಶಕ್ಕೆ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೌರವ ಅತಿಥಿಯಾಗಿ ಭಾಗವಹಿಸಿದ್ದು, ಇಸ್ಲಾಂ ಧರ್ಮದಲ್ಲಿ ಶಾಂತಿಯನ್ನು ಹೇಳಿಕೊಡಲಾಗುತ್ತದೆ. ಆದರೆ ಕೆಲ ದೇಶಗಳು ಭಯೋತ್ಪಾದನೆಗೆ ಆಶ್ರಯ ನೀಡುತ್ತಿವೆ. ಭಯೋತ್ಪಾದನೆಗೆ ಹಣ ನೀಡುವ, ಆಶ್ರಯ ನೀಡುವ ದೇಶಗಳ ಬಣ್ಣ ಬಯಲು ಮಾಡಬೇಕಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡರು.

ಭಾರತ ವಿವಿಧತೆಗಳಿಂದ ಕೂಡಿರುವ ರಾಷ್ಟ್ರವಾಗಿದೆ. ಭಾರತದಲ್ಲಿ ಎಲ್ಲಾ ಧರ್ಮ ಎಲ್ಲಾ ಸಂಸ್ಕೃತಿಯನ್ನು ಗೌರವಿಸಲಾಗುತ್ತದೆ. ರಾಷ್ಟ್ರಪತಿ ಮಹಾತ್ಮಾ ಗಾಂಧಿಜೀ ಅವರು ಜಗತ್ತಿಗೆ ಶಾಂತಿ ಪಾಠವನ್ನು ಬೋಧಿಸಿದರು. ಗಲ್ಫ್ ರಾಷ್ಟ್ರಗಳ ಜೊತೆಗೆ ನಮ್ಮ ಬಾಂಧವ್ಯ ಚೆನ್ನಾಗಿದೆ ಎಂದು ಈ ವೇಳೆ ಸುಷ್ಮಾ ಹೇಳಿದರು.

ಇನ್ನು ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ಸಮಾವೇಶದಲ್ಲಿ ಭಾರತಕ್ಕೆ ಆಹ್ವಾನ ನೀಡಿರುವುದನ್ನು ಖಂಡಿಸಿ ಪಾಕ್ ಸಮಾವೇಶವನ್ನು ಬಹಿಷ್ಕರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!