
ಚೆನ್ನೈ (ಸೆ.27): ತಮಿಳುನಾಡು ಸಿಎಂ ಜಯಲಲಿತಾ ಆರೋಗ್ಯ ಸ್ಥಿತಿ ಇನ್ನೂ ನಿಗೂಢವಾಗಿದೆ. ಕಳೆದ ಗುರುವಾರ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಅವರು ಆಸ್ಪತ್ರೆಯಲ್ಲಿರುವ ಫೋಟೋವನ್ನಾಗಲಿ, ವಿಡಿಯೋವನ್ನಾಗಲಿ ಯಾರಿಗೂ ಕೊಡುತ್ತಿಲ್ಲ.
ಆಸ್ಪತ್ರೆ ವೈದ್ಯರ ಹೇಳಿಕೆ ಬಿಟ್ಟು ಏನೇನೂ ಮಾಹಿತಿ ಸಿಗುತ್ತಿಲ್ಲ. ಇವುಗಳನ್ನು ಗಮನಿಸಿದಾಗ ಜಯಲಲಿತಾ ಆರೋಗ್ಯದ ಸಮಸ್ಯೆ ಗಂಭೀರವಾಗಿರಬಹುದು ಎಂಬ ಅನುಮಾನ ಮೂಡಿದೆ.
ಇದಲ್ಲದೆ, ಅಪೋಲೋ ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.
ಸದ್ಯಕ್ಕಿರುವ ಮಾಹಿತಿ ಎಂದರೆ, ಜಯಲಲಿತಾರನ್ನು ಸಿಂಗಾಪುರಕ್ಕೆ ಕರೆದೊಯ್ಯುವ ನಿರ್ಧಾರ ಕೈಬಿಟ್ಟು, ಮುಂಬೈನಿಂದ ಆಗಮಿಸಿರುವ ವೈದ್ಯರ ತಂಡದಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.