
ಮೈಸೂರು (ಮೇ.04): ಪ್ರವಾಸೋದ್ಯಮ ಇಲಾಖೆ, ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಸಾರವಜನಿಕರು ಸೇರಿದಂತೆ ವಿವಿಧ ವಲಯಗಳಿಂದ ಅತ್ಯತ್ತಮ ಬೆಂಬಲ ಹಾಗೂ ಪ್ರೋತ್ಸಾಹ ದೊರಕಿದೆ.
ಇಂದು ಮೈಸೂರಿನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಸ್ವಯಂಸೇವಕರು, ವಿದ್ಯಾರ್ಥಿಗಳು ಹುಲಿ ರಕ್ಷಣೆ ಹಾಗೂ ವನ್ಯಜೀವಿ ಸಂರಕ್ಷಣೆಯ ಬಗ್ಗೆ ವಿವಿಧ ಗ್ರಾಮಗಳಿಗೆ ತೆರಳಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಈ ಅಭಿಯಾನದ ಅಂಗವಾಗಿ ಘೋಷಣಾ ವಾಕ್ಯ ಹಾಗೂ ಚಿತ್ರಕಲೆ ರಚಿಸುವಿಕೆ ಸೇರಿದಂತೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅತ್ಯುತ್ತಮ ಘೋಷಣಾ ವಾಕ್ಯ ರಚಿಸುವವರಿಗೆ ಅಭಿಯಾನದ ರಾಯಭಾರಿಯಾಗಿರುವ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರ ಜೊತೆ ಪಾಲ್ಗೊಳ್ಳುವ ಅವಕಾಶವಿದೆ.
2 ತಿಂಗಳ ಕಾಲ ನಡೆಯಲಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನದಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮತ್ತು ಜಾಗೃತಿ ಅಭಿಯಾನ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.