ಬೆಂಗಳೂರು ಟ್ಯಾಂಕರ್ ವಾಟರ್ ಸೀಕ್ರೆಟ್ ! ಕುಡಿದ್ರೆ ಹರೋಹರ

Published : Apr 28, 2017, 03:16 PM ISTUpdated : Apr 11, 2018, 12:55 PM IST
ಬೆಂಗಳೂರು ಟ್ಯಾಂಕರ್  ವಾಟರ್ ಸೀಕ್ರೆಟ್ ! ಕುಡಿದ್ರೆ ಹರೋಹರ

ಸಾರಾಂಶ

ಹೌದು…..ಈ ಎಚ್ಚರಿಕೆಯನ್ನ ಅತ್ಯಂತ ತುರ್ತಾಗಿ ನಿಮಗೆ ನೀಡಬೇಕಾಗಿದೆ. ಯಾಕಂದರೆ ರಾಜಧಾನಿ ಬೆಂಗಳೂರಲ್ಲಿ ಟ್ಯಾಂಕರ್ ನೀರು ಹೆಸರಲ್ಲಿ ಚರಂಡಿ ನೀರು ಕುಡಿಸುತ್ತಿದ್ದಾರೆ ಮಾಫಿಯಾ ಮಂದಿ. ಇದರಿಂದ ಜನರಿಗೆ ಬರಬಾರದ ಕಾಯಿಲೆ ಬರುತ್ತಿದೆ.

ಬರದ ಬೇಗೆಯಲ್ಲಿ ಜನ ಕುಡಿಯೋ ನೀರಿಗೆ ಪರದಾಡಿದ್ರೆ ಅವರಿಗೆ ಕೊಳಚೆ ಚರಂಡಿ ನೀರು ಕುಡಿಸುತ್ತಿದೆ ಟ್ಯಾಂಕರ್ ಮಾಫಿಯಾ. ಈ ಶಾಕಿಂಗ್ ಸತ್ಯವನ್ನ  ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಪತ್ತೆ ಹಚ್ಚಿದೆ. ಅ ಸತ್ಯದ ಸಂಕ್ಷಿಪ್ತ ದರ್ಶನ ಇಲ್ಲದೆ ನೋಡಿ.

ಟ್ಯಾಂಕರ್ ನೀರು ಕುಡಿತ್ತಿದ್ದೀರಾ? ಹಾಗಾದ್ರೆ ..ಎಚ್ಚರ …..ಎಚ್ಚರ! ನೀರು ಪ್ರಾಣಕ್ಕೆ ಕುತ್ತಾಗಬಹುದು

ಹೌದು…..ಈ ಎಚ್ಚರಿಕೆಯನ್ನ ಅತ್ಯಂತ ತುರ್ತಾಗಿ ನಿಮಗೆ ನೀಡಬೇಕಾಗಿದೆ. ಯಾಕಂದರೆ ರಾಜಧಾನಿ ಬೆಂಗಳೂರಲ್ಲಿ ಟ್ಯಾಂಕರ್ ನೀರು ಹೆಸರಲ್ಲಿ ಚರಂಡಿ ನೀರು ಕುಡಿಸುತ್ತಿದ್ದಾರೆ ಮಾಫಿಯಾ ಮಂದಿ. ಇದರಿಂದ ಜನರಿಗೆ ಬರಬಾರದ ಕಾಯಿಲೆ ಬರುತ್ತಿದೆ.

ಅತ್ಯಂತ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ತುಂಬಿದ ಕೆರೆ, ತೊರೆ, ದೊಡ್ಡ ಮೋರಿ ಪಕ್ಕದಲ್ಲೇ ಬೋರ್ ಕೊರೆದು ಆ ನೀರನ್ನ ಅಪಾರ್ಟ್'ಮೆಂಟ್, ಹೊಟೇಲ್, ಪಿ.ಜಿ ಸೇರಿದಂತೆ ಹೆಚ್ಚಿನವರಿಗೆ ಕುಡಿಯಲು ಸರಬರಾಜು ಮಾಡುತ್ತಿದ್ದಾರೆ. ಇದು ಕವರ್ ಸ್ಟೋರಿ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿದೆ.

ಈ ವಿಷಪೂರಿತ ಕೆರೆಯಂಚಿನಲ್ಲಿ ಬೋರ್ ಕೊರೆದು ಸರಬರಾಜು ಮಾಡಿದ ನೀರು ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ ಅಂತಾರೆ ಪರಿಸರ ತಜ್ಞರು. ಈ ಕೊಳಕು ನೀರಿನ ಟ್ಯಾಂಕರ್ ಮಾಫಿಯಾ, ಚರಂಡಿ ನೀರಿಗೂ ಟ್ಯಾಂಕರ್'ಗೆ  500ರಿಂದ 2000ಸಾವಿರ ರೂಪಾಯಿವರೆಗೆ ಚಾರ್ಚ್ ಮಾಡುತ್ತೆ. ಇಂಥಾ ಕೊಳಕು ದಂಧೆಯನ್ನು ಕಾರ್ಪೋರೇಟರ್'ಗಳು, ಎಂಎಲ್ಎಗಳು ಅವರ ಸಂಬಂಧಿಕರು, ಸ್ನೇಹಿತರೇ ಅಕ್ರಮವಾಗಿ ನಡೆಸುತ್ತಿರುವುದರಿಂದ

ಇದರ ತಂಟೆಗೆ ಯಾರೂ ಹೋಗುತ್ತಿಲ್ಲ. ಇದು ಈ ನಾಡಿನ ದುರಂತ ಅಲ್ಲದೆ ಮತ್ತಿನ್ನೇನು ಹೇಳಿ.

ವರದಿ: ರಂಜಿತ್ ಹಾಗೂ ವಿಜಯಲಕ್ಷ್ಮಿ ಶಿಬರೂರು, ಸುವರ್ಣ ನ್ಯೂಸ್

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!