
ವಿಜಯಪುರ (ಏ. 03): ದಿಗಂಬರೇಶ್ವರ ರಥೋತ್ಸವದ ವೇಳೆ ಮಕ್ಕಳನ್ನು ತೇರಿನ ಮೇಲಿಂದ ಎಸೆದ ಪ್ರಕರಣದಲ್ಲಿ ಸುವರ್ಣ ನ್ಯೂಸ್ ವರದಿಗೆ ವಿಜಯಪುರ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಸ್ಪಂದಿಸಿದ್ದಾರೆ.
ಸುವರ್ಣ ನ್ಯೂಸ್ ವರದಿ ನೋಡಿ ಅಧಿಕಾರಿಗಳು ಮಠಕ್ಕೆ ಭೇಟಿ ನೀಡಿ, ತಿಳುವಳಿಕೆ ಪತ್ರ ನೀಡಿದ್ದಾರೆ. ದಿಗಂಬರೇಶ್ವರ ಜಾತ್ರಾ ಸಮೀತಿಗೆ ನೊಟೀಸ್ ಜಾರಿ ಮಾಡಿದ್ದಾರೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕೋಲ್ಹಾರದಲ್ಲಿ ಏಪ್ರೀಲ್ 1ರಂದು ದಿಗಂಬರೇಶ್ವರ ಜಾತ್ರೆಯ ವೇಳೆ ಮಕ್ಕಳನ್ನು ಮೇಲಿಂದ ಎಸೆದಿರುವ ಕುರಿತು ಸುವರ್ಣ ನ್ಯೂಸ್ ವರದಿ ಬಿತ್ತರಿಸಿತ್ತು. ವರದಿ ಬಿತ್ತರವಾಗುತ್ತಿದ್ದಂತೆ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿನ ಮುಖ್ಯಸ್ಥರಿಗೆ ನೊಟೀಸ್ ಜಾರಿಗೊಳಿಸಲಾಗಿದೆ.
ರಥೋತ್ಸವದ ವೇಳೆ ಮೇಲಿಂದ ಮಕ್ಕಳನ್ನು ಎಸೆಯುವ ಮೂಲಕ ಮಕ್ಕಳ ಹಕ್ಕು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕ್ರಮ ಮುಗ್ದ ಮಕ್ಕಳ ಮಾನಸಿಕ ಮತ್ತು ಭಾವನಾತ್ಮಕ ಬೆಳೆವಣಿಗೆಯ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.