
ಬೆಂಗಳೂರು[ಜೂ.19]: ಪೋಷಕರು ಬೈದರೆಂದು ಮನೆ ಬಿಟ್ಟು ತಪ್ಪಿಸಿಕೊಂಡಿದ್ದ ಬಾಲಕನೊಬ್ಬ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಮನವಿ ಮೇರೆಗೆ ಮನೆಗೆ ಮರಳಿದ್ದಾನೆ.
ಶ್ರೀನಗರದ ರಮೇಶ್ ಮತ್ತು ರೂಪಾ ದಂಪತಿ ಪುತ್ರ ಮಣಿಕಂಠ ತಪ್ಪಿಸಿಕೊಂಡಿದ್ದ ಬಾಲಕ. ಮೇ 28ರಂದು ರಾತ್ರಿ 9 ಗಂಟೆಗೆ ಕಿಚ್ಚ ಸುದೀಪ್ ಮನವಿ ಮಾಡಿದ್ದ ಸುದ್ದಿಯನ್ನು ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅಭಿಮಾನಿ ಎಂದು ಗೊತ್ತಾಗಿ ಸೆಲ್ಫಿ ಬೈಟ್ ರೆಕಾರ್ಡ್ ಮಾಡಿ ಫೇಸ್ ಬುಕ್ ಮೂಲಕ ಸುದೀಪ್ ಮನೆಗೆ ಮರಳಿ ಬರುವಂತೆ ಮನವಿ ಮಾಡಿದ್ದರು. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುದೀಪ್ ಕೂಡ ಬಾಲಕ ಮರಳಿರುವುದಕ್ಕೆ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.